<p><strong>ರಾಯಚೂರು:</strong> ಜಿಲ್ಲೆಯಾದ್ಯಂತ ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆ ಶುಕ್ರವಾರ ಶಾಂತಿಯುತವಾಗಿ ನಡೆದಿದ್ದು, ಪ್ರಥಮ ಭಾಷೆಗೆ ಒಟ್ಟು 29,888 ನೋಂದಣಿಯಾಗಿದ್ದ ವಿದ್ಯಾರ್ಥಿಗಳ ಪೈಕಿ 28,906 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.</p>.<p>ಇದೇ ಮೊದಲ ಬಾರಿ ಪರೀಕ್ಷೆ ಬರೆದ 28,420 ವಿದ್ಯಾರ್ಥಿಗಳ ಪೈಕಿ, ಅತಿಹೆಚ್ಚು 14,675 ವಿದ್ಯಾರ್ಥಿನಿಯರು ಹಾಜರಾಗಿದ್ದು ವಿಶೇಷ. ಮರುಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದ 654 ವಿದ್ಯಾರ್ಥಿಗಳ ಪೈಕಿ 486 ಮಾತ್ರ ಹಾಜರಾಗಿದ್ದರು. </p>.<p>ರಾಯಚೂರು ತಾಲ್ಲೂಕಿನಲ್ಲಿ 25, ದೇವದುರ್ಗ ತಾಲ್ಲೂಕಿನಲ್ಲಿ 8, ಲಿಂಗಸುಗೂರು ತಾಲ್ಲೂಕಿನಲ್ಲಿ 14, ಮಾನ್ವಿ ತಾಲ್ಲೂಕಿನಲ್ಲಿ 13 ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳಿದ್ದು, ಯಾವುದೇ ನಕಲು ಪತ್ತೆಯಾಗಿಲ್ಲ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಯಚೂರು ತಾಲ್ಲೂಕಿನಲ್ಲಿ 8,538 ವಿದ್ಯಾರ್ಥಿಗಳು ಹಾಜರಾಗಿದ್ದು, 616 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದೇವದುರ್ಗ ತಾಲ್ಲೂಕಿನಲ್ಲಿ 3,762 ಹಾಜರಾಗಿದ್ದು, 37 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 152 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>ಮಾನವಿ ತಾಲ್ಲೂಕಿನ 5,190 ಹಾಜರಾಗಿದ್ದರೆ 63 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿಂಧನೂರು ತಾಲೂಕಿನಲ್ಲಿ 5,366 ವಿದ್ಯಾರ್ಥಿಗಳು ಹಾಜರಾಗಿದ್ದು, 113 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>* ಏಪ್ರಿಲ್ 3 ರಂದು ಗಣಿತ, ಸಮಾಜಶಾಸ್ತ್ರ ಪರೀಕ್ಷೆ</p>.<p>* ರಾಯಚೂರಿನಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು</p>.<p>* ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯಾದ್ಯಂತ ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆ ಶುಕ್ರವಾರ ಶಾಂತಿಯುತವಾಗಿ ನಡೆದಿದ್ದು, ಪ್ರಥಮ ಭಾಷೆಗೆ ಒಟ್ಟು 29,888 ನೋಂದಣಿಯಾಗಿದ್ದ ವಿದ್ಯಾರ್ಥಿಗಳ ಪೈಕಿ 28,906 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.</p>.<p>ಇದೇ ಮೊದಲ ಬಾರಿ ಪರೀಕ್ಷೆ ಬರೆದ 28,420 ವಿದ್ಯಾರ್ಥಿಗಳ ಪೈಕಿ, ಅತಿಹೆಚ್ಚು 14,675 ವಿದ್ಯಾರ್ಥಿನಿಯರು ಹಾಜರಾಗಿದ್ದು ವಿಶೇಷ. ಮರುಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದ 654 ವಿದ್ಯಾರ್ಥಿಗಳ ಪೈಕಿ 486 ಮಾತ್ರ ಹಾಜರಾಗಿದ್ದರು. </p>.<p>ರಾಯಚೂರು ತಾಲ್ಲೂಕಿನಲ್ಲಿ 25, ದೇವದುರ್ಗ ತಾಲ್ಲೂಕಿನಲ್ಲಿ 8, ಲಿಂಗಸುಗೂರು ತಾಲ್ಲೂಕಿನಲ್ಲಿ 14, ಮಾನ್ವಿ ತಾಲ್ಲೂಕಿನಲ್ಲಿ 13 ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳಿದ್ದು, ಯಾವುದೇ ನಕಲು ಪತ್ತೆಯಾಗಿಲ್ಲ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಯಚೂರು ತಾಲ್ಲೂಕಿನಲ್ಲಿ 8,538 ವಿದ್ಯಾರ್ಥಿಗಳು ಹಾಜರಾಗಿದ್ದು, 616 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದೇವದುರ್ಗ ತಾಲ್ಲೂಕಿನಲ್ಲಿ 3,762 ಹಾಜರಾಗಿದ್ದು, 37 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 152 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>ಮಾನವಿ ತಾಲ್ಲೂಕಿನ 5,190 ಹಾಜರಾಗಿದ್ದರೆ 63 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿಂಧನೂರು ತಾಲೂಕಿನಲ್ಲಿ 5,366 ವಿದ್ಯಾರ್ಥಿಗಳು ಹಾಜರಾಗಿದ್ದು, 113 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>* ಏಪ್ರಿಲ್ 3 ರಂದು ಗಣಿತ, ಸಮಾಜಶಾಸ್ತ್ರ ಪರೀಕ್ಷೆ</p>.<p>* ರಾಯಚೂರಿನಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು</p>.<p>* ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>