ರಾಯಚೂರು: ‘ಮಾಜಿ ಸಚಿವ ಸುಧೀಂದ್ರರಾವ್ ಕಸಬೆಯವರು ಬ್ರಾಹ್ಮಣ ಸಮಾಜದ ರಾಜಕೀಯ ಶಕ್ತಿಯಾಗಿದ್ದರು. ಬ್ರಾಹ್ಮಣ ಸಮಾಜಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಸಂಚಾಲಕ ಡಿ.ಕೆ.ಮುರಳಿಧರ್ ತಿಳಿಸಿದರು.
ನಗರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದಿಂದ ಭಾನುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
ಸುಧೀಂದ್ರರಾವ್ ಕಸಬೆ ಅವರುಕಲ್ಮಲಾ ಕ್ಷೇತ್ರದಿಂದ ಆಯ್ಕೆಯಾಗಿ ಗುಂಡುರಾವ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬ್ರಾಹ್ಮಣ ಸಮಾಜದ ಅನೇಕರಿಗೆ ಸಹಾಯ ಸಹಕಾರ ನೀಡಿದ್ದರು ಎಂದು ಹೇಳಿದರು.