<p>ಕವಿತಾಳ: ‘ರಸಗೊಬ್ಬರ ಅಕ್ರಮ ಮಾರಾಟ ಮತ್ತು ಹೆಚ್ಚಿನ ದರ ಪಡೆದಲ್ಲಿ ಕ್ರಮ ಕೈಗೊಳ್ಳಲಾಗುವುದು. ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ವಿತರಣೆ ಮಾಡಬೇಕು’ ಎಂದು ಅಂಗಡಿ ಮಾಲೀಕರಿಗೆ ಕೃಷಿ ಸಹಾಯಕ ಅಧಿಕಾರಿ ಶಿವಶರಣ ಭೋವಿ ತಾಕೀತು ಮಾಡಿದರು.</p>.<p>ಪಟ್ಟಣದಲ್ಲಿ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಮಂಗಳವಾರ ಭೇಟಿ ನೀಡಿ ದಾಸ್ತಾನು ಪರಿಶೀಲಿಸಿದ ಅವರು,‘ರಸಗೊಬ್ಬರ ಕೊರತೆ ಉಂಟಾಗಿಲ್ಲ, ರೈತರು ಆತಂಕ ಪಡುವ ಅಗತ್ಯವಿಲ್ಲ, ಕೃತಕ ಅಭಾವ ಸೃಷ್ಟಿ ಮಾಡಿದಲ್ಲಿ ಇಲಾಖೆ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಯೂರಿಯಾ, ಡಿಎಪಿ, ನ್ಯಾನೊ ಯೂರಿಯಾ, 20:20:0:13 ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಅಗತ್ಯ ಸಂಗ್ರಹವಿದ್ದು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಲು ಕ್ರಮ ವಹಿಸಲಾಗಿದೆ, ಎಫ್ಐಡಿ ಅಥವಾ ಆಧಾರ್ ಗುರುತಿನ ಚೀಟಿ ಒದಗಿಸಿ ರೈತರು ರಸಗೊಬ್ಬರ ಖರೀದಿಸಬಹುದು, ಕೆ-ಕಿಸಾನ್ ತಂತ್ರಾಂಶ ಬಳಕೆಯಲ್ಲಿ ಸರ್ವರ್ ಸಮಸ್ಯೆಯಿಂದ ಕೆಲವೆಡೆ ವಿಳಂಬವಾಗುತ್ತಿದೆ. ಈ ಬಗ್ಗೆ ರೈತರು ಆತಂಕ ಪಡದೆ ಅಂಗಡಿ ಮಾಲೀಕರೊಂದಿಗೆ ಸಹಕರಿಸಬೇಕು, ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ತಿಳಿಸಿದರು.</p>.<p>ಕೃಷಿ ತಾಂತ್ರಿಕ ಸಹಾಯಕ ಪ್ರಜ್ವಲ್ ಕುಮಾರ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-32-1712565723</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ‘ರಸಗೊಬ್ಬರ ಅಕ್ರಮ ಮಾರಾಟ ಮತ್ತು ಹೆಚ್ಚಿನ ದರ ಪಡೆದಲ್ಲಿ ಕ್ರಮ ಕೈಗೊಳ್ಳಲಾಗುವುದು. ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ವಿತರಣೆ ಮಾಡಬೇಕು’ ಎಂದು ಅಂಗಡಿ ಮಾಲೀಕರಿಗೆ ಕೃಷಿ ಸಹಾಯಕ ಅಧಿಕಾರಿ ಶಿವಶರಣ ಭೋವಿ ತಾಕೀತು ಮಾಡಿದರು.</p>.<p>ಪಟ್ಟಣದಲ್ಲಿ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಮಂಗಳವಾರ ಭೇಟಿ ನೀಡಿ ದಾಸ್ತಾನು ಪರಿಶೀಲಿಸಿದ ಅವರು,‘ರಸಗೊಬ್ಬರ ಕೊರತೆ ಉಂಟಾಗಿಲ್ಲ, ರೈತರು ಆತಂಕ ಪಡುವ ಅಗತ್ಯವಿಲ್ಲ, ಕೃತಕ ಅಭಾವ ಸೃಷ್ಟಿ ಮಾಡಿದಲ್ಲಿ ಇಲಾಖೆ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಯೂರಿಯಾ, ಡಿಎಪಿ, ನ್ಯಾನೊ ಯೂರಿಯಾ, 20:20:0:13 ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಅಗತ್ಯ ಸಂಗ್ರಹವಿದ್ದು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಲು ಕ್ರಮ ವಹಿಸಲಾಗಿದೆ, ಎಫ್ಐಡಿ ಅಥವಾ ಆಧಾರ್ ಗುರುತಿನ ಚೀಟಿ ಒದಗಿಸಿ ರೈತರು ರಸಗೊಬ್ಬರ ಖರೀದಿಸಬಹುದು, ಕೆ-ಕಿಸಾನ್ ತಂತ್ರಾಂಶ ಬಳಕೆಯಲ್ಲಿ ಸರ್ವರ್ ಸಮಸ್ಯೆಯಿಂದ ಕೆಲವೆಡೆ ವಿಳಂಬವಾಗುತ್ತಿದೆ. ಈ ಬಗ್ಗೆ ರೈತರು ಆತಂಕ ಪಡದೆ ಅಂಗಡಿ ಮಾಲೀಕರೊಂದಿಗೆ ಸಹಕರಿಸಬೇಕು, ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ತಿಳಿಸಿದರು.</p>.<p>ಕೃಷಿ ತಾಂತ್ರಿಕ ಸಹಾಯಕ ಪ್ರಜ್ವಲ್ ಕುಮಾರ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-32-1712565723</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>