<p><strong>ಕವಿತಾಳ:</strong> ಸಮೀಪದ ಆನ್ವರಿ ಸಂಪರ್ಕಿಸುವ ಮುಖ್ಯ ರಸ್ತೆಯಿಂದ ಕಡ್ಡೋಣಿ ಕ್ರಾಸ್ವರೆಗೆ ನಡೆದ ರಸ್ತೆ ದುರಸ್ತಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಅಂದಾಜು ₹1 ಕೋಟಿ ವೆಚ್ಚದಲ್ಲಿ ಕೈಗೊಂಡ ರಸ್ತೆ ದುರಸ್ತಿ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ವಹಿಸಿಕೊಂಡ ಭೂಸೇನಾ ನಿಗಮದ ಅಧಿಕಾರಿಗಳು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡಿಲ್ಲ ಮಣ್ಣಿನ ಮೇಲೆ ಡಾಂಬರ್ ಹಾಕಿದ್ದು ಕೈ ಯಿಂದ ತೆಗೆದರೂ ಕಿತ್ತು ಬರುತ್ತಿದೆ’ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p>‘ನೆಲ ಅಗೆಯದೇ ಕಂಕರ್ ಮತ್ತು ಮರಂ ಹರಡಿ ಅದರ ಮೇಲೆ ಡಾಂಬರ್ ಹಾಕಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವಾಗಲೇ ಹಿಂದೆ ಡಾಂಬರ್ ಕಿತ್ತು ಬರುತ್ತಿದೆ, ಹಳ್ಳದ ನೀರು ಹರಿಯಲು ಐದು ಕಡೆ ಸಣ್ಣ ಸೇತುವೆಗಳಿದ್ದು ಅವುಗಳನ್ನು ತೆಗೆದು ಹೊಸದಾಗಿ ನಿರ್ಮಿಸಿಲ್ಲ, ಹೀಗಾಗಿ ಸರಾಗವಾಗಿ ನೀರು ಸಾಗಲು ತೊಂದರೆಯಾಗುತ್ತಿದೆ. ಕಳಪೆ ಕಾಮಗಾರಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಾಮಗಾರಿ ಮಾಡುತ್ತಿದ್ದಾರೆ’ ಎಂದು ಗ್ರಾಮದ ಬಸವರಾಜ ಉಪ್ಪಾರ, ಶಿವಪ್ಪ ಪೂಜಾರಿ, ಮಲ್ಲಯ್ಯ ಉದ್ಭಾಳ, ಶಿವಗೇನಿ, ಶಿವಪ್ಪ ಹಾಲಾಪುರ, ಹನುಮಂತ ನಾಯಕ, ಆದಪ್ಪ ಮತ್ತಿತರರು ಆರೋಪಿಸಿದರು.</p>.<div><blockquote>ದಶಕಗಳಿಂದ ಹದಗೆಟ್ಟ ರಸ್ತೆಯಲ್ಲಿಯೇ ಓಡಾಡುತ್ತಿದ್ದೇವೆ. ಕಳಪೆ ಕಾಮಗಾರಿಯಿಂದ ರಸ್ತೆ ಹಾಳಾದರೆ ಮತ್ತೆ ಸಂಕಷ್ಟ ಎದುರಿಸುವಂತಾಗುತ್ತದೆ </blockquote><span class="attribution">ಗುರುಪಾದಪ್ಪ ದಳಪತಿ ಕಡ್ಡೋಣಿ ಗ್ರಾಮಸ್ಥ </span></div>.<div><blockquote>ಅಂದಾಜು ಪಟ್ಟಿಯಂತೆ ಕಾಮಗಾರಿ ನಿರ್ವಹಿಸಲಾಗಿದೆ ಈ ಬಗ್ಗೆ ಸೂಕ್ತ ದಾಖಲೆಗಳಿವೆ. ಸ್ಥಳೀಯರ ಆರೋಪದಲ್ಲಿ ಹುರುಳಿಲ್ಲ </blockquote><span class="attribution">ಹನುಮಂತಪ್ಪ ಎಇಇ ರಾಯಚೂರು ಭೂಸೇನಾ ನಿಗಮ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಸಮೀಪದ ಆನ್ವರಿ ಸಂಪರ್ಕಿಸುವ ಮುಖ್ಯ ರಸ್ತೆಯಿಂದ ಕಡ್ಡೋಣಿ ಕ್ರಾಸ್ವರೆಗೆ ನಡೆದ ರಸ್ತೆ ದುರಸ್ತಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಅಂದಾಜು ₹1 ಕೋಟಿ ವೆಚ್ಚದಲ್ಲಿ ಕೈಗೊಂಡ ರಸ್ತೆ ದುರಸ್ತಿ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ವಹಿಸಿಕೊಂಡ ಭೂಸೇನಾ ನಿಗಮದ ಅಧಿಕಾರಿಗಳು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡಿಲ್ಲ ಮಣ್ಣಿನ ಮೇಲೆ ಡಾಂಬರ್ ಹಾಕಿದ್ದು ಕೈ ಯಿಂದ ತೆಗೆದರೂ ಕಿತ್ತು ಬರುತ್ತಿದೆ’ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p>‘ನೆಲ ಅಗೆಯದೇ ಕಂಕರ್ ಮತ್ತು ಮರಂ ಹರಡಿ ಅದರ ಮೇಲೆ ಡಾಂಬರ್ ಹಾಕಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವಾಗಲೇ ಹಿಂದೆ ಡಾಂಬರ್ ಕಿತ್ತು ಬರುತ್ತಿದೆ, ಹಳ್ಳದ ನೀರು ಹರಿಯಲು ಐದು ಕಡೆ ಸಣ್ಣ ಸೇತುವೆಗಳಿದ್ದು ಅವುಗಳನ್ನು ತೆಗೆದು ಹೊಸದಾಗಿ ನಿರ್ಮಿಸಿಲ್ಲ, ಹೀಗಾಗಿ ಸರಾಗವಾಗಿ ನೀರು ಸಾಗಲು ತೊಂದರೆಯಾಗುತ್ತಿದೆ. ಕಳಪೆ ಕಾಮಗಾರಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಾಮಗಾರಿ ಮಾಡುತ್ತಿದ್ದಾರೆ’ ಎಂದು ಗ್ರಾಮದ ಬಸವರಾಜ ಉಪ್ಪಾರ, ಶಿವಪ್ಪ ಪೂಜಾರಿ, ಮಲ್ಲಯ್ಯ ಉದ್ಭಾಳ, ಶಿವಗೇನಿ, ಶಿವಪ್ಪ ಹಾಲಾಪುರ, ಹನುಮಂತ ನಾಯಕ, ಆದಪ್ಪ ಮತ್ತಿತರರು ಆರೋಪಿಸಿದರು.</p>.<div><blockquote>ದಶಕಗಳಿಂದ ಹದಗೆಟ್ಟ ರಸ್ತೆಯಲ್ಲಿಯೇ ಓಡಾಡುತ್ತಿದ್ದೇವೆ. ಕಳಪೆ ಕಾಮಗಾರಿಯಿಂದ ರಸ್ತೆ ಹಾಳಾದರೆ ಮತ್ತೆ ಸಂಕಷ್ಟ ಎದುರಿಸುವಂತಾಗುತ್ತದೆ </blockquote><span class="attribution">ಗುರುಪಾದಪ್ಪ ದಳಪತಿ ಕಡ್ಡೋಣಿ ಗ್ರಾಮಸ್ಥ </span></div>.<div><blockquote>ಅಂದಾಜು ಪಟ್ಟಿಯಂತೆ ಕಾಮಗಾರಿ ನಿರ್ವಹಿಸಲಾಗಿದೆ ಈ ಬಗ್ಗೆ ಸೂಕ್ತ ದಾಖಲೆಗಳಿವೆ. ಸ್ಥಳೀಯರ ಆರೋಪದಲ್ಲಿ ಹುರುಳಿಲ್ಲ </blockquote><span class="attribution">ಹನುಮಂತಪ್ಪ ಎಇಇ ರಾಯಚೂರು ಭೂಸೇನಾ ನಿಗಮ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>