<p>ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಈಚೆಗೆ ಮುಂಗಾರು ಪೂರ್ವ ಮಳೆ ಸುರಿದ ಹಿನ್ನೆಲೆಯಲ್ಲಿ ಭೂಮಿ ಹದವಾಗಿದ್ದು, ಬಿತ್ತನೆ ಕಾರ್ಯ ಚುರುಕು ಪಡೆದಿದೆ.</p>.<p>ಬೇಸಿಗೆಯಲ್ಲಿ ಭೂಮಿಯಲ್ಲಿನ ಕಳೆ, ಕಸ, ಕಡ್ಡಿ ತೆಗೆದು ಹಸನುಗೊಳಿಸಿದ್ದ ರೈತರು ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದರು. ಈಚೆಗೆ ಸುರಿದ ಧಾರಾಕಾರ ಮಳೆಗೆ ಭೂಮಿ ಹದವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.</p>.<p>ಕೊಳವೆಬಾವಿ ಆಧಾರಿತ ಜಮೀನುಗಳಲ್ಲಿ ರೈತರು ಈಗಾಗಲೇ ಹತ್ತಿ ಬಿತ್ತನೆ ಮಾಡಿದ್ದಾರೆ. ಈಗ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ಹತ್ತಿ ಮತ್ತು ತೊಗರಿ ಬಿತ್ತನೆಗೆ ರೈತರು ಮುಂದಾಗಿದ್ದಾರೆ.</p>.<p>ಕೃಷಿ ಇಲಾಖೆ ಪ್ರಕಾರ ಹೋಬಳಿ ವ್ಯಾಪ್ತಿಯ ಅಂದಾಜು 15,440 ಹೆಕ್ಟೇರ್ ಕೃಷಿ ಭೂಮಿಯಲ್ಲಿ ತೊಗರಿ 4,900 ಹೆಕ್ಟೇರ್, ಹತ್ತಿ 6 ಸಾವಿರ ಹೆಕ್ಟೇರ್ ಸೇರಿದಂತೆ ಸಜ್ಜೆ, ಹೆಸರು, ಸೂರ್ಯಕಾಂತಿ ಹಾಗೂ ಮತ್ತಿತರ ಬೆಳೆ ಬೆಳೆಯುವ ಗುರಿ ಹೊಂದಲಾಗಿದೆ.</p>.<p>ಕಳೆದ ಸಾಲಿನಲ್ಲಿ ತೊಗರಿ 6,500 ಹೆಕ್ಟೇರ್, ಹತ್ತಿ 3 ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿತ್ತು. ಬೆಂಬಲ ಬೆಲೆ ಹೆಚ್ಚಿದ ಪರಿಣಾಮ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಮತ್ತು ತೊಗರಿ ಬಿತ್ತನೆಗೆ ರೈತರು ಆಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-32-591912465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಈಚೆಗೆ ಮುಂಗಾರು ಪೂರ್ವ ಮಳೆ ಸುರಿದ ಹಿನ್ನೆಲೆಯಲ್ಲಿ ಭೂಮಿ ಹದವಾಗಿದ್ದು, ಬಿತ್ತನೆ ಕಾರ್ಯ ಚುರುಕು ಪಡೆದಿದೆ.</p>.<p>ಬೇಸಿಗೆಯಲ್ಲಿ ಭೂಮಿಯಲ್ಲಿನ ಕಳೆ, ಕಸ, ಕಡ್ಡಿ ತೆಗೆದು ಹಸನುಗೊಳಿಸಿದ್ದ ರೈತರು ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದರು. ಈಚೆಗೆ ಸುರಿದ ಧಾರಾಕಾರ ಮಳೆಗೆ ಭೂಮಿ ಹದವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.</p>.<p>ಕೊಳವೆಬಾವಿ ಆಧಾರಿತ ಜಮೀನುಗಳಲ್ಲಿ ರೈತರು ಈಗಾಗಲೇ ಹತ್ತಿ ಬಿತ್ತನೆ ಮಾಡಿದ್ದಾರೆ. ಈಗ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ಹತ್ತಿ ಮತ್ತು ತೊಗರಿ ಬಿತ್ತನೆಗೆ ರೈತರು ಮುಂದಾಗಿದ್ದಾರೆ.</p>.<p>ಕೃಷಿ ಇಲಾಖೆ ಪ್ರಕಾರ ಹೋಬಳಿ ವ್ಯಾಪ್ತಿಯ ಅಂದಾಜು 15,440 ಹೆಕ್ಟೇರ್ ಕೃಷಿ ಭೂಮಿಯಲ್ಲಿ ತೊಗರಿ 4,900 ಹೆಕ್ಟೇರ್, ಹತ್ತಿ 6 ಸಾವಿರ ಹೆಕ್ಟೇರ್ ಸೇರಿದಂತೆ ಸಜ್ಜೆ, ಹೆಸರು, ಸೂರ್ಯಕಾಂತಿ ಹಾಗೂ ಮತ್ತಿತರ ಬೆಳೆ ಬೆಳೆಯುವ ಗುರಿ ಹೊಂದಲಾಗಿದೆ.</p>.<p>ಕಳೆದ ಸಾಲಿನಲ್ಲಿ ತೊಗರಿ 6,500 ಹೆಕ್ಟೇರ್, ಹತ್ತಿ 3 ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿತ್ತು. ಬೆಂಬಲ ಬೆಲೆ ಹೆಚ್ಚಿದ ಪರಿಣಾಮ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಮತ್ತು ತೊಗರಿ ಬಿತ್ತನೆಗೆ ರೈತರು ಆಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-32-591912465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>