<p><strong>ಕವಿತಾಳ</strong>: ‘ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಸಾಹಿತಿ, ನಿವೃತ್ತ ಶಿಕ್ಷಕ ವೆಂಕನಗೌಡ ಪಾಟೀಲ ಹೇಳಿದರು.</p>.<p>ಸಮೀಪದ ವಟಗಲ್ ಗ್ರಾಮದಲ್ಲಿ ಅಮರಮ್ಮ ರಾಮನಗೌಡ ಮಾಲಿ ಪಾಟೀಲ ಸ್ಮರಣಾರ್ಥ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ,‘ಪ್ರತಿ ವರ್ಷದ ಸಂಪ್ರದಾಯದಂತೆ 7, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುತ್ತಿದೆ’ ಎಂದರು.</p>.<p>7ನೇ ತರಗತಿಯ ರೇಣುಕಾ ಶೇಖರಪ್ಪ, ಹತ್ತನೇ ತರಗತಿಯ ಆಕಾಂಕ್ಷಾ ಹಿರೇಮಠ, ಕುಮಾರ ರಾಚೋಟಿ, ದ್ವಿತೀಯ ಪಿಯುಸಿಯ ಅನುಷಾ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು.</p>.<p>ಮುಖಂಡರಾದ ಶಿವಕುಮಾರ ಪಾಟೀಲ, ಆದನಗೌಡ ಪಾಟೀಲ, ಅಮರೇಶ, ಶಿವನಗೌಡ ಪಾಟೀಲ, ಮುಖ್ಯಶಿಕ್ಷಕಿ ಪುಷ್ಪಾ ಪತ್ತಾರ, ಶಿಕ್ಷಕ ಹನುಮೇಶ ಮಡಿವಾಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ‘ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಸಾಹಿತಿ, ನಿವೃತ್ತ ಶಿಕ್ಷಕ ವೆಂಕನಗೌಡ ಪಾಟೀಲ ಹೇಳಿದರು.</p>.<p>ಸಮೀಪದ ವಟಗಲ್ ಗ್ರಾಮದಲ್ಲಿ ಅಮರಮ್ಮ ರಾಮನಗೌಡ ಮಾಲಿ ಪಾಟೀಲ ಸ್ಮರಣಾರ್ಥ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ,‘ಪ್ರತಿ ವರ್ಷದ ಸಂಪ್ರದಾಯದಂತೆ 7, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುತ್ತಿದೆ’ ಎಂದರು.</p>.<p>7ನೇ ತರಗತಿಯ ರೇಣುಕಾ ಶೇಖರಪ್ಪ, ಹತ್ತನೇ ತರಗತಿಯ ಆಕಾಂಕ್ಷಾ ಹಿರೇಮಠ, ಕುಮಾರ ರಾಚೋಟಿ, ದ್ವಿತೀಯ ಪಿಯುಸಿಯ ಅನುಷಾ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು.</p>.<p>ಮುಖಂಡರಾದ ಶಿವಕುಮಾರ ಪಾಟೀಲ, ಆದನಗೌಡ ಪಾಟೀಲ, ಅಮರೇಶ, ಶಿವನಗೌಡ ಪಾಟೀಲ, ಮುಖ್ಯಶಿಕ್ಷಕಿ ಪುಷ್ಪಾ ಪತ್ತಾರ, ಶಿಕ್ಷಕ ಹನುಮೇಶ ಮಡಿವಾಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>