ಕವಿತಾಳ: ಮಸ್ಕಿ ತಾಲ್ಲೂಕಿನ ತೋರಣದಿನ್ನಿ, ಮಲ್ಕಾಪುರ ಮತ್ತು ಶಂಕರನಗರ ಕ್ಯಾಂಪ್ ಸೇರಿ ವಿವಿಧೆಡೆ ಶಾಸಕ ಆರ್.ಬಸನಗೌಡ ತುರುವಿಹಾಳ ಅವರು ಸೋಮವಾರ ಬೆಳೆ ಹಾನಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ,‘ಮಳೆಯಿಂದ ಭತ್ತದ ಬೆಳೆಗೆ ಹಾನಿಯಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ವರದಿಯನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಿದರೆ ರೈತರಿಗೆ ಪರಿಹಾರ ನೀಡಲು ಅನುಕೂಲವಾಗುತ್ತದೆ’ ಎಂದರು.
ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಮುಖಂಡರಾದ ಶರಣಪ್ಪಗೌಡ ತೋರಣದಿನ್ನಿ, ಸುರೇಶ ಸ್ವಾಮಿ, ಮಾರೆಪ್ಪ ಸಾಹುಕಾರ, ನಿಂಗಯ್ಯ, ತಹಶೀಲ್ದಾರ್ ಸುಧಾ ಅರಮನೆ, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಹುಸೇನಸಾಬ್ ಹಾಗೂ ಮತ್ತಿತರರು ಇದ್ದರು.
ಹಾಲಾಪುರ ಹೋಬಳಿ ವ್ಯಾಪ್ತಿಯ ವಿವಿಧ ಹಳ್ಳಿಗಳು ಮತ್ತು ಕ್ಯಾಂಪ್ಗಳಲ್ಲಿ ಶಾಸಕರು ಮತ್ತು ಅಧಿಕಾರಿಗಳು ಬೆಳೆ ಹಾನಿ ಪರಿಶೀಲಿಸಿದರು.