<p><strong>ಕವಿತಾಳ</strong>: ಸಮೀಪದ ಲಕ್ಷ್ಮೀ ನಾರಾಯಣ ಕ್ಯಾಂಪ್ನಲ್ಲಿ ಕೋದಂಡರಾಮ ದೇವಸ್ಥಾನದ ರಜತ ಮಹೋತ್ಸವ ಆಚರಿಸಲಾಯಿತು.</p>.<p>ಬೆಳ್ಳಿ ಹಬ್ಬದ ಅಂಗವಾಗಿ ಬಾಜಾ–ಭಜಂತ್ರಿ ಹಾಗೂ ಮತ್ತಿತರ ಮಂಗಳ ವಾದ್ಯಗಳೊಂದಿಗೆ ಕುಂಭ–ಕಳಸದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ದೇವಸ್ಥಾನದಲ್ಲಿ ಹೋಮ–ಹವನ, ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಅರ್ಚಕ ಸಾಯಿ ಪವನ್ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ, ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ಮುಖಂಡರಾದ ಚಂದ್ರಕಾಂತ ಪಾಟೀಲ ಗೋಗೆಬಾಳ, ಸೂರ್ಯಕಾಂತಗೌಡ, ದೇವರಾಜ ಬಾಗೋಡಿ, ರಮೇಶ ಸೇರಿದಂತೆ ಗಣ್ಯರು ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.</p>.<p>ಸ್ಥಳೀಯ ನಿವಾಸಿಗಳು ಮತ್ತು ಸುತ್ತಲಿನ ಕ್ಯಾಂಪ್ ನಿವಾಸಿಗಳು ಕಾಯಿ–ಕರ್ಪೂರ, ನೈವೇದ್ಯ ಸಮರ್ಪಿಸಿ, ಪೂಜೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-32-1532688843</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಸಮೀಪದ ಲಕ್ಷ್ಮೀ ನಾರಾಯಣ ಕ್ಯಾಂಪ್ನಲ್ಲಿ ಕೋದಂಡರಾಮ ದೇವಸ್ಥಾನದ ರಜತ ಮಹೋತ್ಸವ ಆಚರಿಸಲಾಯಿತು.</p>.<p>ಬೆಳ್ಳಿ ಹಬ್ಬದ ಅಂಗವಾಗಿ ಬಾಜಾ–ಭಜಂತ್ರಿ ಹಾಗೂ ಮತ್ತಿತರ ಮಂಗಳ ವಾದ್ಯಗಳೊಂದಿಗೆ ಕುಂಭ–ಕಳಸದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ದೇವಸ್ಥಾನದಲ್ಲಿ ಹೋಮ–ಹವನ, ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಅರ್ಚಕ ಸಾಯಿ ಪವನ್ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ, ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ಮುಖಂಡರಾದ ಚಂದ್ರಕಾಂತ ಪಾಟೀಲ ಗೋಗೆಬಾಳ, ಸೂರ್ಯಕಾಂತಗೌಡ, ದೇವರಾಜ ಬಾಗೋಡಿ, ರಮೇಶ ಸೇರಿದಂತೆ ಗಣ್ಯರು ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.</p>.<p>ಸ್ಥಳೀಯ ನಿವಾಸಿಗಳು ಮತ್ತು ಸುತ್ತಲಿನ ಕ್ಯಾಂಪ್ ನಿವಾಸಿಗಳು ಕಾಯಿ–ಕರ್ಪೂರ, ನೈವೇದ್ಯ ಸಮರ್ಪಿಸಿ, ಪೂಜೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-32-1532688843</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>