<p><strong>ಕವಿತಾಳ</strong>: ‘ಸಾಮೂಹಿಕ ವಿವಾಹ ಸಮಾರಂಭಗಳಿಂದ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಆರೂಢ ಅಯ್ಯಪ್ಪ ತಾತನವರ 44ನೇ ಮತ್ತು ಆರೂಢ ಕರಿಬಸವ ಸ್ವಾಮೀಜಿಯ 10ನೇ ಪುಣ್ಯಸ್ಮರಣೆ ಅಂಗವಾಗಿ ಸಮೀಪದ ಮಲ್ಲದಗುಡ್ಡ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿ ವರ್ಷ ಸಾಮೂಹಿಕ ವಿವಾಹ ಏರ್ಪಡಿಸಿ, ಬಡ ಕುಟುಂಬಗಳಿಗೆ ಅನು ಕೂಲ ಕಲ್ಪಿಸುವುದು, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಪುರಸ್ಕರಿಸುವ ಆರೂಢ ಮಠದ ಸಂಪ್ರದಾಯ ಮಾದರಿಯಾಗಿದೆ’ ಎಂದರು.</p>.<p>ಗಲಗ ಮಠದ ಗಂಗಾಧರ ಸ್ವಾಮೀಜಿ, ಕೊಡೇಕಲ್ ಮಠದ ಸಂಗಯ್ಯ ಸ್ವಾಮಿ, ಯರಮರಸ್ನ ಕಲಿಗಣನಾಥ ಸ್ವಾಮೀಜಿ, ಆರೂಢ ಅಯ್ಯಪ್ಪ ತಾತ, ಅಬ್ಬಾಸ್ ಅಲೀ ತಾತ, ಮುಖಂಡ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಬಿಜೆಪಿ ಮುಖಂಡ ಪ್ರಸನ್ನ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.</p>.<p>ವಿವಾಹ ಸಮಾರಂಭದಲ್ಲಿ 11 ಜೋಡಿ ನವ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<p>ಆರೂಢ ಅಯ್ಯಪ್ಪ ತಾತನವರ ತುಲಾಭಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ‘ಸಾಮೂಹಿಕ ವಿವಾಹ ಸಮಾರಂಭಗಳಿಂದ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಆರೂಢ ಅಯ್ಯಪ್ಪ ತಾತನವರ 44ನೇ ಮತ್ತು ಆರೂಢ ಕರಿಬಸವ ಸ್ವಾಮೀಜಿಯ 10ನೇ ಪುಣ್ಯಸ್ಮರಣೆ ಅಂಗವಾಗಿ ಸಮೀಪದ ಮಲ್ಲದಗುಡ್ಡ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿ ವರ್ಷ ಸಾಮೂಹಿಕ ವಿವಾಹ ಏರ್ಪಡಿಸಿ, ಬಡ ಕುಟುಂಬಗಳಿಗೆ ಅನು ಕೂಲ ಕಲ್ಪಿಸುವುದು, ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಪುರಸ್ಕರಿಸುವ ಆರೂಢ ಮಠದ ಸಂಪ್ರದಾಯ ಮಾದರಿಯಾಗಿದೆ’ ಎಂದರು.</p>.<p>ಗಲಗ ಮಠದ ಗಂಗಾಧರ ಸ್ವಾಮೀಜಿ, ಕೊಡೇಕಲ್ ಮಠದ ಸಂಗಯ್ಯ ಸ್ವಾಮಿ, ಯರಮರಸ್ನ ಕಲಿಗಣನಾಥ ಸ್ವಾಮೀಜಿ, ಆರೂಢ ಅಯ್ಯಪ್ಪ ತಾತ, ಅಬ್ಬಾಸ್ ಅಲೀ ತಾತ, ಮುಖಂಡ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಬಿಜೆಪಿ ಮುಖಂಡ ಪ್ರಸನ್ನ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.</p>.<p>ವಿವಾಹ ಸಮಾರಂಭದಲ್ಲಿ 11 ಜೋಡಿ ನವ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<p>ಆರೂಢ ಅಯ್ಯಪ್ಪ ತಾತನವರ ತುಲಾಭಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>