ಕವಿತಾಳ: ‘ಸಾಮೂಹಿಕ ವಿವಾಹ ಸಮಾರಂಭಗಳಿಂದ ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಿದೆʼ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಪಾಮನಕಲ್ಲೂರು ಗ್ರಾಮದಲ್ಲಿ ಆದಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದರು.
ಮಲ್ಲದಗುಡ್ಡ ಆರೂಢ ಮಠದ ಅಯ್ಯಪ್ಪ ತಾತ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಂತೋಷ ರಾಜಗುರು, ಮುಖಂಡರಾದ ರವಿ ಜಹಗೀರದಾರ, ಶ್ರೀಶೈಲಪ್ಪ ಉಪಸ್ಥಿತರಿದ್ದರು.
ನಾಲ್ಕು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಸವ ಜಯಂತಿ ಹಾಗೂ ಜಾತ್ರೆ ನಿಮಿತ್ತ ರಥೋತ್ಸವ ಅದ್ದೂರಿಯಾಗಿ ಜರುಗಿತು. ಪಾಮನಕಲ್ಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮದಲ್ಲಿ ಶುಕ್ರವಾರ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ನಾಲ್ಕು ಜೋಡಿ ವಧು ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.