<p><strong>ಕವಿತಾಳ</strong>: ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿ ಕ್ರೀಡಾಭಿಮಾನಿಗಳು ಉಪ ತಹಶೀಲ್ದಾರ್ ಮಂಜುನಾಥ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ಇಲ್ಲಿನ ಸರ್ಕಾರಿ ಜಾಗ ಸರ್ವೆ ನಂಬರ್ 19/2 ಮತ್ತು 19/3 ರಲ್ಲಿ 6 ಎಕರೆ ಜಮೀನು ಗುರುತಿಸಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಭೂಮಿ ಪೂಜೆ ಮಾಡಲಾಗಿದೆ. ಜಾಗದ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ’ ಎಂದು ಹೇಳಿದರು.</p>.<p>ಸದ್ರಿ ಜಮೀನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರುತ್ತದೆ ಎನ್ನುವ ಕಾರಣಕ್ಕೆ ಕಾಮಗಾರಿ ಆರಂಭಕ್ಕೆ ತಡೆಯೊಡ್ಡಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರೀಡಾಂಗಣ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಕರವೇ ಮುಖಂಡ ಸಂತೋಷ ಕಲಶೆಟ್ಟಿ ಒತ್ತಾಯಿಸಿದರು.</p>.<p>ಮುಖಂಡರಾದ ಶ್ರೀನಿವಾಸ ಗುತ್ತೇದಾರ, ಲಿಂಗರಾಜ ಗುತ್ತೇದಾರ, ಅನೀಫ್, ರಿಯಾಜ್ ಆನ್ವರಿ, ಕೆಂಚಪ್ಪ, ಎಂ.ಡಿ.ರಫಿ, ಮೌನೇಶ, ದಸ್ತು, ಮಂಜುನಾಥ, ಮಲ್ಲಿಕಾರ್ಜುನ, ಬಸವರಾಜ, ಅಜಯ್ ಕಲಶೆಟ್ಟಿ, ಸುರೇಶ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿ ಕ್ರೀಡಾಭಿಮಾನಿಗಳು ಉಪ ತಹಶೀಲ್ದಾರ್ ಮಂಜುನಾಥ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>‘ಇಲ್ಲಿನ ಸರ್ಕಾರಿ ಜಾಗ ಸರ್ವೆ ನಂಬರ್ 19/2 ಮತ್ತು 19/3 ರಲ್ಲಿ 6 ಎಕರೆ ಜಮೀನು ಗುರುತಿಸಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಭೂಮಿ ಪೂಜೆ ಮಾಡಲಾಗಿದೆ. ಜಾಗದ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ’ ಎಂದು ಹೇಳಿದರು.</p>.<p>ಸದ್ರಿ ಜಮೀನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರುತ್ತದೆ ಎನ್ನುವ ಕಾರಣಕ್ಕೆ ಕಾಮಗಾರಿ ಆರಂಭಕ್ಕೆ ತಡೆಯೊಡ್ಡಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರೀಡಾಂಗಣ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಕರವೇ ಮುಖಂಡ ಸಂತೋಷ ಕಲಶೆಟ್ಟಿ ಒತ್ತಾಯಿಸಿದರು.</p>.<p>ಮುಖಂಡರಾದ ಶ್ರೀನಿವಾಸ ಗುತ್ತೇದಾರ, ಲಿಂಗರಾಜ ಗುತ್ತೇದಾರ, ಅನೀಫ್, ರಿಯಾಜ್ ಆನ್ವರಿ, ಕೆಂಚಪ್ಪ, ಎಂ.ಡಿ.ರಫಿ, ಮೌನೇಶ, ದಸ್ತು, ಮಂಜುನಾಥ, ಮಲ್ಲಿಕಾರ್ಜುನ, ಬಸವರಾಜ, ಅಜಯ್ ಕಲಶೆಟ್ಟಿ, ಸುರೇಶ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>