<p>ಜಾಲಹಳ್ಳಿ: ಸಮೀಪದ ಮುಂಡರಗಿ ಗ್ರಾಮದ ನಿವಾಸಿ ನಿರ್ಗತಿಕ ಮಹಿಳೆ ರೇಣುಕಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ವಾತ್ಸಲ್ಯ ಯೋಜನೆಯಡಿ ನಿರ್ಮಿಸಿದ ಮನೆಯನ್ನು ಸಂಸ್ಥೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಗುರುವಾರ ಹಸ್ತಾಂತರ ಮಾಡಿದರು.</p>.<p>ನಂತರ ಅವರು ಮಾತನಾಡಿ, ‘ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಗೆ ಸಂಸ್ಥೆ ಗ್ರಾಮೀಣ ಪ್ರದೇಶದ ಬಡವರಿಗೆ ಆದ್ಯತೆ ನೀಡಿ, ಸಮಾಜದ ಅತ್ಯಂತ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿದೆ. ಈ ಗ್ರಾಮದ ಮಹಿಳೆ ರೇಣುಕಮ್ಮ ಅವರಿಗೆ ಮನೆ ಮಾತ್ರ ಅಲ್ಲದೇ ಪ್ರತಿ ತಿಂಗಳು ₹1000 ಹಣ ಕೂಡ ನೀಡಲಾಗುತ್ತಿದೆ’ ಎಂದರು.</p>.<p>ಇದೇ ರೀತಿ ದೇವದುರ್ಗ ತಾಲ್ಲೂಕಿನಲ್ಲಿ ಇಲ್ಲಿವರೆಗೆ ಸುಮಾರು 48 ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ವಿತರಣೆ ಮಾಡಲಾಗಿದೆ. ಕಳೆದ ಇಪ್ಪತ್ತು ದಿನಗಳ ಹಿಂದೆಯೇ ಮನೆ ನಿರ್ಮಿಣಕ್ಕೆ ಭೂಮಿ ಪೂಜೆ ಕೈಗೊಳ್ಳಲಾಗಿತ್ತು ಎಂದರು.</p>.<p>ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ, ಪಿಎಸ್ಐ ವೈಶಾಲಿ ಝಳಕಿ, ಮುಂಡರಗಿ ಗ್ರಾಮದ ಶಿವರಾಯ ದೇವಸ್ಥಾನದ ನರಸಣ್ಣ ತಾತಾ, ಯೋಜನಾಧಿಕಾರಿ ವೇಣುಗೋಪಾಲ, ಶರಣಪ್ಪ, ಬಾಲಯ್ಯ, ಅಶ್ವಿನಿ, ಭರತ ಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-32-1884147163</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ: ಸಮೀಪದ ಮುಂಡರಗಿ ಗ್ರಾಮದ ನಿವಾಸಿ ನಿರ್ಗತಿಕ ಮಹಿಳೆ ರೇಣುಕಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ವಾತ್ಸಲ್ಯ ಯೋಜನೆಯಡಿ ನಿರ್ಮಿಸಿದ ಮನೆಯನ್ನು ಸಂಸ್ಥೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಗುರುವಾರ ಹಸ್ತಾಂತರ ಮಾಡಿದರು.</p>.<p>ನಂತರ ಅವರು ಮಾತನಾಡಿ, ‘ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಗೆ ಸಂಸ್ಥೆ ಗ್ರಾಮೀಣ ಪ್ರದೇಶದ ಬಡವರಿಗೆ ಆದ್ಯತೆ ನೀಡಿ, ಸಮಾಜದ ಅತ್ಯಂತ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿದೆ. ಈ ಗ್ರಾಮದ ಮಹಿಳೆ ರೇಣುಕಮ್ಮ ಅವರಿಗೆ ಮನೆ ಮಾತ್ರ ಅಲ್ಲದೇ ಪ್ರತಿ ತಿಂಗಳು ₹1000 ಹಣ ಕೂಡ ನೀಡಲಾಗುತ್ತಿದೆ’ ಎಂದರು.</p>.<p>ಇದೇ ರೀತಿ ದೇವದುರ್ಗ ತಾಲ್ಲೂಕಿನಲ್ಲಿ ಇಲ್ಲಿವರೆಗೆ ಸುಮಾರು 48 ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ವಿತರಣೆ ಮಾಡಲಾಗಿದೆ. ಕಳೆದ ಇಪ್ಪತ್ತು ದಿನಗಳ ಹಿಂದೆಯೇ ಮನೆ ನಿರ್ಮಿಣಕ್ಕೆ ಭೂಮಿ ಪೂಜೆ ಕೈಗೊಳ್ಳಲಾಗಿತ್ತು ಎಂದರು.</p>.<p>ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ, ಪಿಎಸ್ಐ ವೈಶಾಲಿ ಝಳಕಿ, ಮುಂಡರಗಿ ಗ್ರಾಮದ ಶಿವರಾಯ ದೇವಸ್ಥಾನದ ನರಸಣ್ಣ ತಾತಾ, ಯೋಜನಾಧಿಕಾರಿ ವೇಣುಗೋಪಾಲ, ಶರಣಪ್ಪ, ಬಾಲಯ್ಯ, ಅಶ್ವಿನಿ, ಭರತ ಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-32-1884147163</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>