ರೈತರು ನಡುಗಡ್ಡೆಯಲ್ಲಿ ಸಿಲುಕಿರುವ ಬಗ್ಗೆ ಶನಿವಾರ ರಾತ್ರಿ 9 ಗಂಟೆಗೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿ ತಲುಪಿತು. ಕೂಡಲೇ ನದಿತೀರದತ್ತ ಕಾರ್ಯಾಚರಣೆಗಾಗಿ ರಾತ್ರಿಯೇ ಧಾವಿಸಲು ಸೂಚಿಸಲಾಯಿತು. 10 ಗಂಟೆಯಿಂದ ಯೋಜನೆ ರೂಪಿಸಿಕೊಂಡು, ಕಾರ್ಯಾಚರಣೆ ಆರಂಭಿಸಿದ ಪ್ರವಾಹ ನಿರ್ವಹಣಾ ತಂಡದವರು ರೈತರನ್ನು ರಾತ್ರಿ 11.50 ಕ್ಕೆ ಯಂತ್ರಚಾಲಿತ ಬೋಟ್ ನಲ್ಲಿ ಕರೆತಂದರು.