ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರು ರೈತರ ರಕ್ಷಣೆ

Last Updated 25 ಜುಲೈ 2021, 3:13 IST
ಅಕ್ಷರ ಗಾತ್ರ

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರು ರೈತರನ್ನು ಎನ್ ಡಿ ಆರ್ ಎಫ್ ಹಾಗೂ ಎಸ್ ಟಿ ಆರ್ ಎಫ್ ತಂಡದವರು ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಆಹಾರವಿಲ್ಲದೆ ಸಂಕಷ್ಟಕ್ಕೀಡಾಗಿದ್ದ ನಿರುಪಾದಪ್ಪ, ಹುಲಗಪ್ಪ ಹಾಗೂ ದುರುಗಪ್ಪ ಅವರು ಸುರಕ್ಷಿತವಾಗಿ ನಡುಗಡ್ಡೆಯಿಂದ ಹೊರಬಂದಿದ್ದಾರೆ.

ರೈತರು ನಡುಗಡ್ಡೆಯಲ್ಲಿ ಸಿಲುಕಿರುವ ಬಗ್ಗೆ ಶನಿವಾರ ರಾತ್ರಿ 9 ಗಂಟೆಗೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿ ತಲುಪಿತು. ಕೂಡಲೇ ನದಿತೀರದತ್ತ ಕಾರ್ಯಾಚರಣೆಗಾಗಿ ರಾತ್ರಿಯೇ ಧಾವಿಸಲು ಸೂಚಿಸಲಾಯಿತು. 10 ಗಂಟೆಯಿಂದ ಯೋಜನೆ ರೂಪಿಸಿಕೊಂಡು, ಕಾರ್ಯಾಚರಣೆ ಆರಂಭಿಸಿದ ಪ್ರವಾಹ ನಿರ್ವಹಣಾ ತಂಡದವರು ರೈತರನ್ನು ರಾತ್ರಿ 11.50 ಕ್ಕೆ ಯಂತ್ರಚಾಲಿತ ಬೋಟ್ ನಲ್ಲಿ ಕರೆತಂದರು.

ತವದಗಡ್ಡಿಯಲ್ಲಿದ್ದ ಜಮೀನಿನಲ್ಲಿ ಕೃಷಿಕಾರ್ಯಕ್ಕಾಗಿ ಶುಕ್ರವಾರ ಬೆಳಿಗ್ಗೆ ರೈತರು ಹೋಗಿದ್ದರು. ಸ್ವಲ್ಪಮಟ್ಟದ ಪ್ರವಾಹದಲ್ಲಿ ಎಂದಿನಂತೆ ಈಜಿಕೊಂಡು ಹೊರಬರುವ ವಿಶ್ವಾಸದಲ್ಲಿ ರೈತರು ಉಳಿದಿದ್ದರು. ಆದರೆ ಒಂದೇ ದಿನದಲ್ಲಿ ಪ್ರವಾಹಮಟ್ಟ 3 ಲಕ್ಷ ಕ್ಯಸೆಕ್ ಗೆ ಏರಿಕೆ ಆಗಿದ್ದರಿಂದ ಈಜಲು ಯತ್ನಿಸಿದರೂ ಆತಂಕಗೊಂಡು ಹೊರಬರಲು ಸಾಧ್ಯವಾಗಿರಲಿಲ್ಲ. ತಾಲ್ಲೂಕು ತಹಶೀಲ್ದಾರ್ ಅವರಿಗೆ ಈ ಬಗ್ಗೆ ಸಂಬಂಧಿಗಳು ಮಾಹಿತಿ ನೀಡಿದ್ದರು.

ಆದರೆ, ವಿವಿಧೆಡೆ ನದಿತೀರ ಪರಿಸ್ಥಿತಿ ಪರಿಶೀಲಿಸಲು ಹೋಗಿದ್ದ ನೂತನ ಜಿಲ್ಲಾಧಿಕಾರಿ ಡಾ.ಸತೀಶ್ ಅವರೊಂದಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೆಲ್ಲ ದಿನವಿಡೀ ಇದ್ದರು.

ರಾತ್ರಿಯಾದ ಬಳಿಕ ರೈತರ ಸಂಬಂಧಿಗಳು ಈ ವಿಷಯವನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದರು.ಲಿಂಗಸುಗೂರು ತಾಲ್ಲೂಕು ತಹಶೀಲ್ದಾರ್ ಸೇರಿ ಪ್ರವಾಹ ನಿರ್ವಹಣಾ ಅಧಿಕಾರಿಗಳೆಲ್ಲ ಕಾರ್ಯಾಚರಣೆ ಮುಗಿಯುವವರೆಗೆ ನದಿ ತೀರದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT