<p><strong>ರಾಯಚೂರು: </strong>'ಈ ಹಿಂದೆ ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆಲಕಚ್ಚಿತ್ತು. ಈಗ ಶ್ರೀರಾಮನ ಬಗ್ಗೆಯೂ ಮಾತನಾಡಿದರೆ ನೆಲದ ಒಳಗೆ ಹೋಗ್ತಾರೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>'ಗೋರಕ್ಷಕರನ್ನು ಕೊಲೆ ಮಾಡಿದವರ ರಕ್ಷಣೆಯನ್ನು ಸಿದ್ದರಾಮಯ್ಯ ಮಾಡಿದ್ದರು. ಗೋಮಾತೆ ಶಾಪದಿಂದಲೇ ಸಿದ್ದರಾಮಯ್ಯ ಸರ್ಕಾರ ಕಳೆದುಕೊಂಡ್ರು, ಚಾಮುಂಡೇಶ್ವರಿ ಕ್ಷೇತ್ರ ಸೋತ್ರು, ಆದ್ರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ' ಎಂದು ಹರಿಹಾಯ್ದರು.</p>.<p>'ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವನು' ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು.</p>.<p>'ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೆ ವಿವಾದಿತ ಸ್ಥಳ ಎಂದಿದ್ದಾರೆ. ಮಂದಿರ ನಿರ್ಮಾಣದ ಕುರಿತುಅವನು ಮೋದಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಬಹುದೆ' ಎಂದು ಪ್ರಶ್ನಿಸಿದರು.</p>.<p>'ರಾಮನ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿ ಬಿಡಬೇಕು. ಮಂದಿರ ಕಟ್ಟಲು ಕೂಲಿ ಮಾಡುವ ಒಬ್ಬ ವ್ಯಕ್ತಿ ₹10 ನೀಡಿದ್ದಾರೆ. ಅವರು ಲೆಕ್ಕ ಕೇಳಲಿ. ಆದರೆ ಇವನಾರು ಲೆಕ್ಕ ಕೇಳಲು' ಎಂದು ಕಿಡಿ ಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>'ಈ ಹಿಂದೆ ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆಲಕಚ್ಚಿತ್ತು. ಈಗ ಶ್ರೀರಾಮನ ಬಗ್ಗೆಯೂ ಮಾತನಾಡಿದರೆ ನೆಲದ ಒಳಗೆ ಹೋಗ್ತಾರೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>'ಗೋರಕ್ಷಕರನ್ನು ಕೊಲೆ ಮಾಡಿದವರ ರಕ್ಷಣೆಯನ್ನು ಸಿದ್ದರಾಮಯ್ಯ ಮಾಡಿದ್ದರು. ಗೋಮಾತೆ ಶಾಪದಿಂದಲೇ ಸಿದ್ದರಾಮಯ್ಯ ಸರ್ಕಾರ ಕಳೆದುಕೊಂಡ್ರು, ಚಾಮುಂಡೇಶ್ವರಿ ಕ್ಷೇತ್ರ ಸೋತ್ರು, ಆದ್ರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ' ಎಂದು ಹರಿಹಾಯ್ದರು.</p>.<p>'ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವನು' ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು.</p>.<p>'ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೆ ವಿವಾದಿತ ಸ್ಥಳ ಎಂದಿದ್ದಾರೆ. ಮಂದಿರ ನಿರ್ಮಾಣದ ಕುರಿತುಅವನು ಮೋದಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಬಹುದೆ' ಎಂದು ಪ್ರಶ್ನಿಸಿದರು.</p>.<p>'ರಾಮನ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿ ಬಿಡಬೇಕು. ಮಂದಿರ ಕಟ್ಟಲು ಕೂಲಿ ಮಾಡುವ ಒಬ್ಬ ವ್ಯಕ್ತಿ ₹10 ನೀಡಿದ್ದಾರೆ. ಅವರು ಲೆಕ್ಕ ಕೇಳಲಿ. ಆದರೆ ಇವನಾರು ಲೆಕ್ಕ ಕೇಳಲು' ಎಂದು ಕಿಡಿ ಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>