<p><strong>ಕವಿತಾಳ</strong>: ಕೆಎಸ್ಆರ್ಪಿ 13ನೇ ತುಕಡಿ ಸ್ಥಾಪನೆಗೆ ಸಮೀಪದ ವಟಗಲ್ ಗ್ರಾಮದಲ್ಲಿ ಗುರುತಿಸಿದ ಜಾಗವನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಡಿವೈಎಸ್ಪಿ ಪ್ರಭಾನಂದ ಗೋಡಖೆ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಯ್ಯ ಮಂಗಳವಾರ ಪರಿಶೀಲಿಸಿದರು.</p>.<p>ರಾಯಚೂರು ಜಿಲ್ಲೆಯಲ್ಲಿ ಕೆಎಸ್ಆರ್ಪಿ 13ನೇ ತುಕಡಿ ಸ್ಥಾಪನೆ ಅಗತ್ಯವಿದ್ದು, ಹಣಕಾಸು ಇಲಾಖೆಗೆ ಮರು ಪ್ರಸ್ತಾವ ಸಲ್ಲಿಸುವಂತೆ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಡಿಜಿ, ಐಜಿಪಿ ಅವರು ಈಚೆಗೆ ಪತ್ರ ಬರೆದಿದ್ದರು.</p>.<p>‘ವಟಗಲ್ ಗ್ರಾಮದ ಹತ್ತಿರ ಸರ್ಕಾರಿ ಭೂಮಿ ಲಭ್ಯವಿದ್ದು, 13ನೇ ತುಕಡಿ ಸ್ಥಾಪನೆಗೆ ಅಗತ್ಯವಿರುವ ಜಮೀನು ನೀಡಲು ಅವಕಾಶವಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದರು.</p>.<p>‘ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಮತ್ತು ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕವಿತಾಳ ಠಾಣೆ ಪಿಎಸ್ಐ ಗುರುಚಂದ್ರ ಯಾದವ, ಮುಖಂಡರಾದ ಬಸವರಾಜ ಬುಂಕಲದೊಡ್ಡಿ ಮತ್ತು ಬಲವಂತರಾಯ ವಟಗಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಕೆಎಸ್ಆರ್ಪಿ 13ನೇ ತುಕಡಿ ಸ್ಥಾಪನೆಗೆ ಸಮೀಪದ ವಟಗಲ್ ಗ್ರಾಮದಲ್ಲಿ ಗುರುತಿಸಿದ ಜಾಗವನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಡಿವೈಎಸ್ಪಿ ಪ್ರಭಾನಂದ ಗೋಡಖೆ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಯ್ಯ ಮಂಗಳವಾರ ಪರಿಶೀಲಿಸಿದರು.</p>.<p>ರಾಯಚೂರು ಜಿಲ್ಲೆಯಲ್ಲಿ ಕೆಎಸ್ಆರ್ಪಿ 13ನೇ ತುಕಡಿ ಸ್ಥಾಪನೆ ಅಗತ್ಯವಿದ್ದು, ಹಣಕಾಸು ಇಲಾಖೆಗೆ ಮರು ಪ್ರಸ್ತಾವ ಸಲ್ಲಿಸುವಂತೆ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಡಿಜಿ, ಐಜಿಪಿ ಅವರು ಈಚೆಗೆ ಪತ್ರ ಬರೆದಿದ್ದರು.</p>.<p>‘ವಟಗಲ್ ಗ್ರಾಮದ ಹತ್ತಿರ ಸರ್ಕಾರಿ ಭೂಮಿ ಲಭ್ಯವಿದ್ದು, 13ನೇ ತುಕಡಿ ಸ್ಥಾಪನೆಗೆ ಅಗತ್ಯವಿರುವ ಜಮೀನು ನೀಡಲು ಅವಕಾಶವಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದರು.</p>.<p>‘ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಮತ್ತು ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕವಿತಾಳ ಠಾಣೆ ಪಿಎಸ್ಐ ಗುರುಚಂದ್ರ ಯಾದವ, ಮುಖಂಡರಾದ ಬಸವರಾಜ ಬುಂಕಲದೊಡ್ಡಿ ಮತ್ತು ಬಲವಂತರಾಯ ವಟಗಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>