ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಿಂದ ಕೆಲವು ಮಾರ್ಗಗಳಿಗೆ ಸರ್ಕಾರಿ ಬಸ್ ಗಳ ಸಂಚಾರವು ಸೋಮವಾರದಿಂದ ಆರಂಭವಾಗಿದೆ.
ಹೈದರಾಬಾದ್, ಗಂಗಾವತಿ, ಗದ್ವಾಲ್, ಕಲಬುರ್ಗಿ ಮಾರ್ಗಗಳಿಗೆ ಒಟ್ಟು 12 ಬಸ್ ಗಳು ತೆರಳಿದವು. ಮಂತ್ರಾಲಯ ಸೇರಿ ಇನ್ನಷ್ಟು ಮಾರ್ಗಕ್ಕೂ ಬಸ್ ಗಳು ಸಂಚರಿಸಲಿವೆ ಎಂದು ನಿಲ್ದಾಣದ ನಿಯಂತ್ರಕ ದೇವರೆಡ್ಡಿ ತಿಳಿಸಿದರು.
ಬಸ್ ಚಾಲಕರು ಹಾಗೂ ನಿರ್ವಾಹಕರು ಗ್ರಾಮೀಣ ಭಾಗಗಳಿಂದ ಬರಬೇಕಿದ್ದು, ಫೋನ್ ಮಾಡಿ ಕರೆಸುತ್ತಿದ್ದೇವೆ. ಐಟಿಪಿಸಿಆರ್ ತಪಾಸಣೆ ಮಾಡಿಕೊಂಡವರು ಹಾಗೂ ಲಸಿಕೆ ಪಡೆದವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಲಾಗುತ್ತಿದೆ ಎಂದರು.
ವಿವಿಧ ಊರುಗಳಿಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದತ್ತ ಬರುತ್ತಿದ್ದಾರೆ. ಒಟ್ಟಾರೆ ಜನಜೀವನ ಸಹಜತೆಯತ್ತ ಮರಳುತ್ತಿದೆ.