<p><strong>ರಾಯಚೂರು:</strong> ನಿತ್ಯ ಜನಜಂಗುಳಿ, ಬಸ್ ಓಡಾಟದಿಂದ ಕೂಡಿರುತ್ತಿದ್ದ ಕೇಂದ್ರ ಬಸ್ ನಿಲ್ದಾಣವು ಬಿಕೋ ಎನ್ನುತ್ತಿದೆ. ಜಿಲ್ಲೆಯ ಎಲ್ಲ ಏಳು ಡಿಪೋಗಳಲ್ಲಿಯೂ ಇದೇ ಸ್ಥಿತಿ ಇದೆ. ಚಾಲಕರು ಮತ್ತು ನಿರ್ವಾಹಕರು ಬಸ್ ನಿಲ್ದಾಣದತ್ತ ಸುಳಿಯುತ್ತಿಲ್ಲ.</p>.<p>ರಾಯಚೂರು ಬಸ್ ನಿಲ್ದಾಣದ ಮುಂಭಾಗ ಕ್ರೂಸರ್, ಜೀಪ್ ಹಾಗೂ ಆಟೋಗಳಲ್ಲಿ ಪ್ರಯಾಣಿಕರು ವಿವಿಧೆಡೆ ತೆರಳುತ್ತಿದ್ದಾರೆ.</p>.<p>'ಚಾಲಕರು ಮತ್ತು ನಿರ್ವಾಹಕರ ಮನವೊಲಿಸಿ ಕೆಲಸ ನಿರ್ವಹಿಸಲು ಕರೆಯುತ್ತಿದ್ದೇವೆ. ಕೆಲವರು ಬರುವುದಕ್ಕೆ ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ವೇಳೆಗೆ ಕೆಲವರು ಬರಬಹುದಾಗಿದ್ದು, ಪ್ರಮುಖ ಮಾರ್ಗಗಳಲ್ಲಿ ಬಸ್ ಆರಂಭಿಸುತ್ತೇವೆ' ಎಂದು ಎನ್ ಇಕೆಆರ್ ಟಿಸಿ ರಾಯಚೂರು ವಿಭಾಗೀಯ ನಿಯಂತ್ರಕ ವೆಂಕಟೇಶ ತಿಳಿಸಿದರು.</p>.<p>ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದ ಸರ್ಕಾರಿ ಬಸ್ ಗಳು ಬರುತ್ತಿದ್ದು, ಕರ್ನೂಲ್, ಮಂತ್ರಾಲಯ, ಗದ್ವಾಲ್, ಮೆಹಬೂಬನಗರ್ ಕಡೆಗೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಸಂಚರಿಸುತ್ತಿದ್ದಾರೆ.</p>.<p><a href="https://www.prajavani.net/district/dharwad/ksrtc-workers-protest-in-hubli-and-bus-services-affected-in-dharwad-820124.html" itemprop="url">ಸಾರಿಗೆ ನೌಕರರ ಮುಷ್ಕರ: ಹಳೇ ಬಸ್ ನಿಲ್ದಾಣದಿಂದ ಖಾಸಗಿ ಬಸ್ ಸಂಚಾರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಿತ್ಯ ಜನಜಂಗುಳಿ, ಬಸ್ ಓಡಾಟದಿಂದ ಕೂಡಿರುತ್ತಿದ್ದ ಕೇಂದ್ರ ಬಸ್ ನಿಲ್ದಾಣವು ಬಿಕೋ ಎನ್ನುತ್ತಿದೆ. ಜಿಲ್ಲೆಯ ಎಲ್ಲ ಏಳು ಡಿಪೋಗಳಲ್ಲಿಯೂ ಇದೇ ಸ್ಥಿತಿ ಇದೆ. ಚಾಲಕರು ಮತ್ತು ನಿರ್ವಾಹಕರು ಬಸ್ ನಿಲ್ದಾಣದತ್ತ ಸುಳಿಯುತ್ತಿಲ್ಲ.</p>.<p>ರಾಯಚೂರು ಬಸ್ ನಿಲ್ದಾಣದ ಮುಂಭಾಗ ಕ್ರೂಸರ್, ಜೀಪ್ ಹಾಗೂ ಆಟೋಗಳಲ್ಲಿ ಪ್ರಯಾಣಿಕರು ವಿವಿಧೆಡೆ ತೆರಳುತ್ತಿದ್ದಾರೆ.</p>.<p>'ಚಾಲಕರು ಮತ್ತು ನಿರ್ವಾಹಕರ ಮನವೊಲಿಸಿ ಕೆಲಸ ನಿರ್ವಹಿಸಲು ಕರೆಯುತ್ತಿದ್ದೇವೆ. ಕೆಲವರು ಬರುವುದಕ್ಕೆ ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ವೇಳೆಗೆ ಕೆಲವರು ಬರಬಹುದಾಗಿದ್ದು, ಪ್ರಮುಖ ಮಾರ್ಗಗಳಲ್ಲಿ ಬಸ್ ಆರಂಭಿಸುತ್ತೇವೆ' ಎಂದು ಎನ್ ಇಕೆಆರ್ ಟಿಸಿ ರಾಯಚೂರು ವಿಭಾಗೀಯ ನಿಯಂತ್ರಕ ವೆಂಕಟೇಶ ತಿಳಿಸಿದರು.</p>.<p>ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದ ಸರ್ಕಾರಿ ಬಸ್ ಗಳು ಬರುತ್ತಿದ್ದು, ಕರ್ನೂಲ್, ಮಂತ್ರಾಲಯ, ಗದ್ವಾಲ್, ಮೆಹಬೂಬನಗರ್ ಕಡೆಗೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಸಂಚರಿಸುತ್ತಿದ್ದಾರೆ.</p>.<p><a href="https://www.prajavani.net/district/dharwad/ksrtc-workers-protest-in-hubli-and-bus-services-affected-in-dharwad-820124.html" itemprop="url">ಸಾರಿಗೆ ನೌಕರರ ಮುಷ್ಕರ: ಹಳೇ ಬಸ್ ನಿಲ್ದಾಣದಿಂದ ಖಾಸಗಿ ಬಸ್ ಸಂಚಾರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>