ಕೆಲಸಕ್ಕೆ ಹಾಜರಾದ ಸಿಬ್ಬಂದಿಗೆ ಮಾರ್ಗದ ಬಸ್ ನೀಡದೇ ಸತಾಯಿಸಲಾಗುತ್ತಿದ್ದು, ಸೇವೆಗೆ ಬಂದರೂ ರಜೆಯೆಂದು ಪರಿಗಣಿಸಲಾಗುತ್ತಿದೆ. ಸೌಲಭ್ಯಗಳಿಂದ ವಂಚಿಸಲಾಗುತ್ತಿದ್ದು, ಬಸ್ ನಿರ್ವಾಹಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ವರ್ಗಾವಣೆ ಮತ್ತು ಚಾರ್ಜ್ಶೀಟ್ ಹಾಕಲಾಗುತ್ತಿದೆ. ಕೆಲಸ ಮಾಡಿದರೂ ಸಿಬ್ಬಂದಿ ಕಿರುಕುಳ ಅನುಭವಿಸಬೇಕಾಗಿದೆ ಎಂದರು.