<p><strong>ರಾಯಚೂರು</strong>: ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ 50ರಷ್ಟು ಬಸ್ಗಳು ಮಾತ್ರ ಸಂಚಾರಕ್ಕೆ ಇಳಿದಿವೆ. ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಬಸ್ಗಳು ಓಡಾಡುತ್ತಿವೆ.</p><p>ರಸ್ತೆ ಸಾರಿಗೆ ನೌಕರರ ಮುಷ್ಕರ ಇದೆ ಎಂದು ಮೊದಲೇ ತಿಳಿದ ಕಾರಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲ. ಪ್ರೌಢಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. </p><p>ಲಿಂಗಸುಗೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಪ್ರಯಾಣಿಕರ ಪರದಾಟ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಓಡಾಟ ಮುಂದುವರಿದಿದೆ. ಮಾನ್ವಿಯಲ್ಲಿ ಬಸ್ ಸಂಚಾರ ವಿರಳವಾಗಿದೆ. ದೇವದುರ್ಗ ಘಟಕದ 34 ಬಸ್ಗಳು ಓಡಾಡುತ್ತಿದ್ದವು. ಮುಷ್ಕರ ಹಿನ್ನೆಲೆ 9 ಬಸ್ ಓಡುತ್ತಿವೆ ಎಂದು ಘಟಕ ವ್ಯವಸ್ಥಾಪಕ ರಾಮನಗೌಡ ತಿಳಿಸಿದ್ದಾರೆ.</p><p>ಮಸ್ಕಿಯಲ್ಲಿ ಅಲ್ಲೊಂದು ಇಲ್ಲೊಂದು ಈಶಾನ್ಯ ಸಾರಿಗೆ ಸಂಸ್ಥೆ ಬಸ್ಗಳು ಸಂಚರಿಸುತ್ತಿವೆ. ಖಾಸಗಿ ಕ್ಯಾಬ್ಗಳು ರಸ್ತೆಗೆ ಇಳಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ 50ರಷ್ಟು ಬಸ್ಗಳು ಮಾತ್ರ ಸಂಚಾರಕ್ಕೆ ಇಳಿದಿವೆ. ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಬಸ್ಗಳು ಓಡಾಡುತ್ತಿವೆ.</p><p>ರಸ್ತೆ ಸಾರಿಗೆ ನೌಕರರ ಮುಷ್ಕರ ಇದೆ ಎಂದು ಮೊದಲೇ ತಿಳಿದ ಕಾರಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲ. ಪ್ರೌಢಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. </p><p>ಲಿಂಗಸುಗೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಪ್ರಯಾಣಿಕರ ಪರದಾಟ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಓಡಾಟ ಮುಂದುವರಿದಿದೆ. ಮಾನ್ವಿಯಲ್ಲಿ ಬಸ್ ಸಂಚಾರ ವಿರಳವಾಗಿದೆ. ದೇವದುರ್ಗ ಘಟಕದ 34 ಬಸ್ಗಳು ಓಡಾಡುತ್ತಿದ್ದವು. ಮುಷ್ಕರ ಹಿನ್ನೆಲೆ 9 ಬಸ್ ಓಡುತ್ತಿವೆ ಎಂದು ಘಟಕ ವ್ಯವಸ್ಥಾಪಕ ರಾಮನಗೌಡ ತಿಳಿಸಿದ್ದಾರೆ.</p><p>ಮಸ್ಕಿಯಲ್ಲಿ ಅಲ್ಲೊಂದು ಇಲ್ಲೊಂದು ಈಶಾನ್ಯ ಸಾರಿಗೆ ಸಂಸ್ಥೆ ಬಸ್ಗಳು ಸಂಚರಿಸುತ್ತಿವೆ. ಖಾಸಗಿ ಕ್ಯಾಬ್ಗಳು ರಸ್ತೆಗೆ ಇಳಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>