ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಕರ್ತವ್ಯಕ್ಕೆ‌ ಹಾಜರಾಗುತ್ತಿರುವ ಸಾರಿಗೆ ‌ನೌಕರರು

Last Updated 21 ಏಪ್ರಿಲ್ 2021, 7:33 IST
ಅಕ್ಷರ ಗಾತ್ರ

ರಾಯಚೂರು: ಕರ್ನಾಟಕ ರಾಜ್ಯ ಈಶಾನ್ಯ ಸಾರಿಗೆ ನಿಗಮ (ಎನ್ ಇಕೆಆರ್ ಟಿಸಿ) ರಾಯಚೂರು ವಿಭಾಗೀಯ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದು ಈಗಾಗಲೇ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಸುಗಳ ಸಂಚಾರ ಆರಂಭವಾಗಿದೆ.

ರಾಯಚೂರಿನಿಂದ ದೇವದುರ್ಗ ಲಿಂಗಸುಗೂರು, ಮಾನ್ವಿ, ಸಿಂಧನೂರು ಸೇರಿದಂತೆ ಜಿಲ್ಲೆಯಾದ್ಯಂತ ಬಸ್ಸುಗಳು ಸಂಚರಿಸುತ್ತಿವೆ. ಅಲ್ಲದೆ ನೆರೆಯ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಬಸ್ಸು ಸಂಚಾರ ಆರಂಭಿಸಿವೆ.

ಹೈಕೋರ್ಟ್ ಸಲಹೆ ಆಧರಿಸಿ ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಸಂಜೆ ಹೊತ್ತಿಗೆ‌ ಹಾಜರಾತಿ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಸದ್ಯ ಶೇ 30 ರಷ್ಟು ನೌಕರರು ಬಂದಿದ್ದಾರೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT