<p><strong>ರಾಯಚೂರು:</strong> ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಕಾರ್ಮಿಕ ಸಂಘಟನೆಗಳ ತೀವ್ರ ವಿರೋಧದ ನಡುವೆ ಕೇಂದ್ರ ಸರ್ಕಾರ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ನವೆಂಬರ್ 21ರಿಂದ ಜಾರಿ ಮಾಡಿದೆ. ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>‘ನಾಲ್ಕು ಕಾರ್ಮಿಕ ಸಂಹಿತೆಗಳ ಈ ನಿರಂಕುಶ ಮತ್ತು ಅಪ್ರಜಾಸತ್ತಾತ್ಮಕ ಅಧಿಸೂಚನೆಯು ಎಲ್ಲ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಧಿಕ್ಕರಿಸುತ್ತದೆ. ಭಾರತದ ಕಲ್ಯಾಣ ರಾಜ್ಯದ ಸ್ವರೂಪವನ್ನು ಧ್ವಂಸಗೊಳಿಸಿದೆ. ಅಸ್ತಿತ್ವದಲ್ಲಿದ್ದ 29 ಕೇಂದ್ರ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿದೆ’ ಎಂದರು.</p>.<p>ಕಾರ್ಮಿಕ ಸಂಘಟನೆಗಳು ಅನೇಕ ಬಾರಿ ಪ್ರತಿಭಟನೆ ನಡೆಸಿವೆ. ಸಭೆಗಳನ್ನು ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ತನ್ನ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದರು.</p>.<p>ಕಾರ್ಮಿಕರ ಹಕ್ಕುಗಳು ಮತ್ತು ಅರ್ಹತೆಗಳನ್ನು ಕಸಿದುಕೊಂಡು ಗುಲಾಮಗಿರಿಯನ್ನು ಹೇರಲು ಪ್ರಯತ್ನಿಸುವ ಈ ಸಂಹಿತೆಗಳು ಕಾರ್ಮಿಕರ ಜೀವನ ಮತ್ತು ಜೀವನೋಪಾಯದ ಮೇಲೆ ಮಾರಣಾಂತಿಕ ದಾಳಿ ಮಾಡಿವೆ ಎಂದು ಟೀಕಿಸಿದರು.</p>.<p>ಪ್ರತಿಭಟನಕಾರರು ಟಿಪ್ಪು ಸುಲ್ತಾನ್ ಉದ್ಯಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಅಂಬೇಡ್ಕರ್ ವೃತ್ತದಲ್ಲಿ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯ ಪ್ರತಿಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯ ನೇತೃತ್ವನ್ನು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ.ಪ್ರಧಾನ ಕಾಯ೯ದಶಿ೯, ಡಿ.ಎಸ್.ಶರಣಬಸವ, ಪದಾಧಿಕಾರಿಗಳಾದ ರುದ್ರಪ್ಪನಾಯಕ, ಯೂಸುಫ್ ಸಾಬ, ಶರ್ಫುದ್ದೀನ್, ಚನ್ನಾರೆಡ್ಡಿ, ಈರಣ್ಣಸ್ವಾಮಿ, ಮರಿಯಮ್ಮ ಕೆ.ಜಿ. ವೀರೇಶ, ರೇಣುಕಮ್ಮ ಕರಿಯಪ್ಪ ಅಚ್ಚೊಳ್ಳಿ, ಜಿಲಾನಿ ಪಾಷಾ, ಗೋಕುರಮ್ಮ, ಕಲ್ಯಾಣಮ್ಮ, ವಿಶ್ವನಾಥಸ್ವಾಮಿ, ಅಕ್ಕಮಹಾದೇವಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಕಾರ್ಮಿಕ ಸಂಘಟನೆಗಳ ತೀವ್ರ ವಿರೋಧದ ನಡುವೆ ಕೇಂದ್ರ ಸರ್ಕಾರ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ನವೆಂಬರ್ 21ರಿಂದ ಜಾರಿ ಮಾಡಿದೆ. ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>‘ನಾಲ್ಕು ಕಾರ್ಮಿಕ ಸಂಹಿತೆಗಳ ಈ ನಿರಂಕುಶ ಮತ್ತು ಅಪ್ರಜಾಸತ್ತಾತ್ಮಕ ಅಧಿಸೂಚನೆಯು ಎಲ್ಲ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಧಿಕ್ಕರಿಸುತ್ತದೆ. ಭಾರತದ ಕಲ್ಯಾಣ ರಾಜ್ಯದ ಸ್ವರೂಪವನ್ನು ಧ್ವಂಸಗೊಳಿಸಿದೆ. ಅಸ್ತಿತ್ವದಲ್ಲಿದ್ದ 29 ಕೇಂದ್ರ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿದೆ’ ಎಂದರು.</p>.<p>ಕಾರ್ಮಿಕ ಸಂಘಟನೆಗಳು ಅನೇಕ ಬಾರಿ ಪ್ರತಿಭಟನೆ ನಡೆಸಿವೆ. ಸಭೆಗಳನ್ನು ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ತನ್ನ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದರು.</p>.<p>ಕಾರ್ಮಿಕರ ಹಕ್ಕುಗಳು ಮತ್ತು ಅರ್ಹತೆಗಳನ್ನು ಕಸಿದುಕೊಂಡು ಗುಲಾಮಗಿರಿಯನ್ನು ಹೇರಲು ಪ್ರಯತ್ನಿಸುವ ಈ ಸಂಹಿತೆಗಳು ಕಾರ್ಮಿಕರ ಜೀವನ ಮತ್ತು ಜೀವನೋಪಾಯದ ಮೇಲೆ ಮಾರಣಾಂತಿಕ ದಾಳಿ ಮಾಡಿವೆ ಎಂದು ಟೀಕಿಸಿದರು.</p>.<p>ಪ್ರತಿಭಟನಕಾರರು ಟಿಪ್ಪು ಸುಲ್ತಾನ್ ಉದ್ಯಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಅಂಬೇಡ್ಕರ್ ವೃತ್ತದಲ್ಲಿ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯ ಪ್ರತಿಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯ ನೇತೃತ್ವನ್ನು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ.ಪ್ರಧಾನ ಕಾಯ೯ದಶಿ೯, ಡಿ.ಎಸ್.ಶರಣಬಸವ, ಪದಾಧಿಕಾರಿಗಳಾದ ರುದ್ರಪ್ಪನಾಯಕ, ಯೂಸುಫ್ ಸಾಬ, ಶರ್ಫುದ್ದೀನ್, ಚನ್ನಾರೆಡ್ಡಿ, ಈರಣ್ಣಸ್ವಾಮಿ, ಮರಿಯಮ್ಮ ಕೆ.ಜಿ. ವೀರೇಶ, ರೇಣುಕಮ್ಮ ಕರಿಯಪ್ಪ ಅಚ್ಚೊಳ್ಳಿ, ಜಿಲಾನಿ ಪಾಷಾ, ಗೋಕುರಮ್ಮ, ಕಲ್ಯಾಣಮ್ಮ, ವಿಶ್ವನಾಥಸ್ವಾಮಿ, ಅಕ್ಕಮಹಾದೇವಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>