<p>ರಾಯಚೂರು: ಬಂಡವಾಳಶಾಹಿ ವ್ಯವಸ್ಥೆ ವಿರುದ್ಧ ಹೋರಾಟ ಮುಂದುವರಿಸಬೇಕಿದ್ದು, ಇದಕ್ಕಾಗಿ ಕಾರ್ಮಿಕರೆಲ್ಲ ಒಂದಾಗಿ ಚಳವಳಿ ರೂಪಿಸುವ ಅಗತ್ಯವಿದೆ ಎಂದು ಎಐಯುಟಿಯುಸಿ ಆಶಾ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಸಮಿತಿ ಉಪಾಧ್ಯಕ್ಷೆ ನಾಗಲಕ್ಷ್ಮೀ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎಐಯುಟಿಯುಸಿ ಸಂಘಟನೆಯಿಂದ ಭಾನುವಾರ ಆಯೋಜಿಸಿದ್ದ 136ನೇ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಮಿಕರ ಬದುಕು ಕಟ್ಟುವ ನಿಟ್ಟಿನಲ್ಲಿ ಸಮಾಜದ ಕನಸು ನನಸು ಮಾಡುವುದಕ್ಕೆ ಯೋಜನೆ ರೂಪಿಸಬೇಕಿದೆ. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಉದ್ದೇಶಕ್ಕಾಗಿ 136 ವರ್ಷಗಳ ಹಿಂದೆ ಕಾರ್ಮಿಕ ಸಂಘಟನೆ ಹುಟ್ಟುಕೊಂಡಿದೆ. ಕಾರ್ಮಿಕರಿಗೆ ವಿಶ್ರಾಂತಿ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದ್ದರೂ, ಈ ವ್ಯವಸ್ಥೆ ವಿರುದ್ಧ ಸಿಡಿದೆದ್ದಾಗ ಹೋರಾಟ ಶುರುವಾಯಿತು ಎಂದರು.</p>.<p>1886ರಲ್ಲಿ ಅಮೆರಿಕದಲ್ಲಿ ನಡೆದ ಕಾರ್ಮಿಕರ ಹೋರಾಟದಂತೆ ಮತ್ತೆ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಹೋರಾಟದ ಫಲವಾಗಿ ನಾವು ಎಂಟು ಗಂಟೆಗಳ ದುಡಿಮೆಯ ಸೌಲಭ್ಯವನ್ನು ಪಡೆದಿದ್ದೇವೆ. ಆದರೆ, ಮತ್ತೆ ಹಳೆಯ ಪರಿಸ್ಥಿತಿಗೆ ಕಾರ್ಮಿಕರನ್ನು ತಳ್ಳುವ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ ಎಂದು ಹೇಳಿದರು.</p>.<p>ಈ ಎಲ್ಲ ಸಮಸ್ಯೆಗಳಿಗೆ ಬಂಡವಾಳಶಾಹಿ ವ್ಯವಸ್ಥೆಯೇ ಮೂಲ ಕಾರಣವಾಗಿದೆ. ಆದ್ದರಿಂದ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಕಾರ್ಮಿಕರ ವರ್ಗದ ಸಮಾಜವಾದಿ ವ್ಯವಸ್ಥೆ ನಿರ್ಮಿಸಿದಾಗ ಮಾತ್ರವೇ ಕಾರ್ಮಿಕರು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷ ಎನ್.ಎಸ್.ವೀರೇಶ ಮಾತನಾಡಿ, ಭಾರತದಲ್ಲಿ ಬಡತನ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ರೈತರು ಬೆಳೆಗೆ ಬೆಲೆ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾರ್ಮಿಕರಂತೂ ದುಡಿಯುವುದರಲ್ಲೇ ಜೀವನ ಸವೆಸುತ್ತಿದ್ದಾರೆ ಎಂದು ಹೇಳಿದರು.</p>.<p>ನಗರದ ಅಂಬೇಡ್ಕರ್ ವೃತ್ತದಿಂದ ರಂಗಮಂದಿರದವರೆಗೂ ಎಐಯುಟಿಯುಸಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಕಾರ್ಮಿಕರ ರ್ಯಾಲಿ ನಡೆಸಲಾಯಿತು. ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ತಿರುಮಲ ರಾವ್ ಅಧ್ಯಕ್ಷತೆ ವಹಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಮಹೇಶ್ ಚಿಕಲಪರ್ವಿ ನಿರೂಪಿಸಿದರು.</p>.<p>ಈರಮ್ಮ, ಪ್ರಭಾವತಿ,ಲಕ್ಷ್ಮೀ,ರಾಧಾ,ರಾಘವೇಂದ್ರ ಪಾಟೀಲ, ರಾಮಾಂಜನೇಯ, ನಾಗರಾಜ್,ಯಲ್ಲಪ್ಪ ನಾಮಾಲಿ, ನರಸಪ್ಪ, ಸಲೀಂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಬಂಡವಾಳಶಾಹಿ ವ್ಯವಸ್ಥೆ ವಿರುದ್ಧ ಹೋರಾಟ ಮುಂದುವರಿಸಬೇಕಿದ್ದು, ಇದಕ್ಕಾಗಿ ಕಾರ್ಮಿಕರೆಲ್ಲ ಒಂದಾಗಿ ಚಳವಳಿ ರೂಪಿಸುವ ಅಗತ್ಯವಿದೆ ಎಂದು ಎಐಯುಟಿಯುಸಿ ಆಶಾ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಸಮಿತಿ ಉಪಾಧ್ಯಕ್ಷೆ ನಾಗಲಕ್ಷ್ಮೀ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎಐಯುಟಿಯುಸಿ ಸಂಘಟನೆಯಿಂದ ಭಾನುವಾರ ಆಯೋಜಿಸಿದ್ದ 136ನೇ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಮಿಕರ ಬದುಕು ಕಟ್ಟುವ ನಿಟ್ಟಿನಲ್ಲಿ ಸಮಾಜದ ಕನಸು ನನಸು ಮಾಡುವುದಕ್ಕೆ ಯೋಜನೆ ರೂಪಿಸಬೇಕಿದೆ. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಉದ್ದೇಶಕ್ಕಾಗಿ 136 ವರ್ಷಗಳ ಹಿಂದೆ ಕಾರ್ಮಿಕ ಸಂಘಟನೆ ಹುಟ್ಟುಕೊಂಡಿದೆ. ಕಾರ್ಮಿಕರಿಗೆ ವಿಶ್ರಾಂತಿ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದ್ದರೂ, ಈ ವ್ಯವಸ್ಥೆ ವಿರುದ್ಧ ಸಿಡಿದೆದ್ದಾಗ ಹೋರಾಟ ಶುರುವಾಯಿತು ಎಂದರು.</p>.<p>1886ರಲ್ಲಿ ಅಮೆರಿಕದಲ್ಲಿ ನಡೆದ ಕಾರ್ಮಿಕರ ಹೋರಾಟದಂತೆ ಮತ್ತೆ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಹೋರಾಟದ ಫಲವಾಗಿ ನಾವು ಎಂಟು ಗಂಟೆಗಳ ದುಡಿಮೆಯ ಸೌಲಭ್ಯವನ್ನು ಪಡೆದಿದ್ದೇವೆ. ಆದರೆ, ಮತ್ತೆ ಹಳೆಯ ಪರಿಸ್ಥಿತಿಗೆ ಕಾರ್ಮಿಕರನ್ನು ತಳ್ಳುವ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ ಎಂದು ಹೇಳಿದರು.</p>.<p>ಈ ಎಲ್ಲ ಸಮಸ್ಯೆಗಳಿಗೆ ಬಂಡವಾಳಶಾಹಿ ವ್ಯವಸ್ಥೆಯೇ ಮೂಲ ಕಾರಣವಾಗಿದೆ. ಆದ್ದರಿಂದ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಕಾರ್ಮಿಕರ ವರ್ಗದ ಸಮಾಜವಾದಿ ವ್ಯವಸ್ಥೆ ನಿರ್ಮಿಸಿದಾಗ ಮಾತ್ರವೇ ಕಾರ್ಮಿಕರು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷ ಎನ್.ಎಸ್.ವೀರೇಶ ಮಾತನಾಡಿ, ಭಾರತದಲ್ಲಿ ಬಡತನ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ರೈತರು ಬೆಳೆಗೆ ಬೆಲೆ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾರ್ಮಿಕರಂತೂ ದುಡಿಯುವುದರಲ್ಲೇ ಜೀವನ ಸವೆಸುತ್ತಿದ್ದಾರೆ ಎಂದು ಹೇಳಿದರು.</p>.<p>ನಗರದ ಅಂಬೇಡ್ಕರ್ ವೃತ್ತದಿಂದ ರಂಗಮಂದಿರದವರೆಗೂ ಎಐಯುಟಿಯುಸಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಕಾರ್ಮಿಕರ ರ್ಯಾಲಿ ನಡೆಸಲಾಯಿತು. ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ತಿರುಮಲ ರಾವ್ ಅಧ್ಯಕ್ಷತೆ ವಹಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಮಹೇಶ್ ಚಿಕಲಪರ್ವಿ ನಿರೂಪಿಸಿದರು.</p>.<p>ಈರಮ್ಮ, ಪ್ರಭಾವತಿ,ಲಕ್ಷ್ಮೀ,ರಾಧಾ,ರಾಘವೇಂದ್ರ ಪಾಟೀಲ, ರಾಮಾಂಜನೇಯ, ನಾಗರಾಜ್,ಯಲ್ಲಪ್ಪ ನಾಮಾಲಿ, ನರಸಪ್ಪ, ಸಲೀಂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>