<p><strong>ಸಿಂಧನೂರು: </strong>ಮಾರ್ಚ್ ತಿಂಗಳಿನಿಂದ ಕಾಡುತ್ತಿರುವ ಕೊರೊನಾ ರೋಗದ ಕುರಿತು ಜನರಿಗೆ ಜಾಗೃತಿ ಕೊರತೆ ಇದೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರಿಗೂ ಕೋವಿಡ್ ಪರೀಕ್ಷೆ ಮಾಡಿಸಬೇಕು ಎನ್ನುವ ಉದ್ದೇಶದಿಂದ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿ ಚಿಕಿತ್ಸೆ ನೀಡುವ ಟ್ರಯಾಜ್ ತಂಡಕ್ಕೆ ಜನರಿಂದ ಮಾತ್ರ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ.</p>.<p>ನಗರಸಭೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಒಳಗೊಂಡ ಟ್ರಯಾಜ್ ತಂಡ ಎರಡು ವಾಹನ ಹಾಗೂ 50ಕ್ಕೂ ಹೆಚ್ಚು ಆರೋಗ್ಯ ರಕ್ಷಣಾ ಕಿಟ್ಗಳೊಂದಿಗೆ ನಗರಸಭೆ ವ್ಯಾಪ್ತಿಯ 31 ವಾರ್ಡ್ಗಳ ಮನೆಗಳಿಗೆ ಭೇಟಿ ನೀಡುತ್ತಿದೆ.</p>.<p>ಸಾರ್ವಜನಿಕರ ‘ನಿಮ್ಮಿಂದಲೇ ನಮಗೆ ಭಯವಾಗುತ್ತಿದೆ’ ಎನ್ನುವ ಮಾತು ಕೊರೊನಾ ವಾರಿಯರ್ಸ್ಗೆ ಬೇಸರ ತಂದಿದೆ.</p>.<p>ಕೋವಿಡ್ ಪರೀಕ್ಷೆಗೆ ನಾಗರಿಕರು ಮುಂದೆ ಬಾರದಿರುವುದಕ್ಕೆ ರಾಯಚೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯುತ್ತಾರೆನ್ನುವ ಭೀತಿಯೇ ಮುಖ್ಯ ಕಾರಣ. ರೋಗ ಲಕ್ಷಣ ಕಂಡು ಬಂದವರನ್ನು ಮತ್ತು ಸೋಂಕಿತರನ್ನು ರಾಯಚೂರು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ.</p>.<p>ಈಗ ಪರಿಸ್ಥಿತಿ ಭಿನ್ನವಾಗಿದೆ. ಸೋಂಕಿತರಾಗಿರಲಿ ಅಥವಾ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟ ವ್ಯಕ್ತಿಗಳಾಗಿರಲಿ ತಮ್ಮ, ತಮ್ಮ ಮನೆಗಳಲ್ಲಿಯೇ ಕ್ವಾರೆಂಟೈನ್ಗೆ ಒಳಗಾಗಬೇಕು. ಆಸ್ಪತ್ರೆ ಸಿಬ್ಬಂದಿ ಅಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಪರೀಕ್ಷೆಗೆ ಒಳಪಡಲು ಭಯ ಪಡುವ ಅಗತ್ಯವಿಲ್ಲ ಎನ್ನುತ್ತಾರೆ ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜೀವನೇಶ್ವರಯ್ಯ.</p>.<p>ಈಗಾಗಲೇ ತಾಲ್ಲೂಕಿನಲ್ಲಿ ಇಲ್ಲಿಯವರೆಗೆ 14 ಸಾವಿರ ಜನರನ್ನು ಪರೀಕ್ಷೆ ಮಾಡಲಾಗಿದೆ. 1469 ಜನರಿಗೆ ಸೋಂಕು ದೃಢಪಟ್ಟಿದೆ. 428 ಸಕ್ರಿಯ ಪ್ರಕರಣಗಳಿವೆ. 37 ಜನ ಮೃತಪಟ್ಟಿದ್ದಾರೆ. ಗುಣಮುಖರಾಗುವವರ ಸಂಖ್ಯೆ ಅಧಿಕವಾಗಿದೆ.</p>.<p>ಗರ್ಭಿಣಿಯರು, ಸಕ್ಕರೆ, ಬಿಪಿ ಕಾಯಿಲೆ ಇರುವವರು, ಕಿಡ್ನಿ ವೈಫಲ್ಯ ಮತ್ತಿತರ ಕಾಯಿಲೆ ಇರುವವರು ಪರೀಕ್ಷೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆದರೆ ರೋಗ ನಿಯಂತ್ರಿಸಬಹುದು. ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಮುಖಂಡರು ಆರೋಗ್ಯ ಇಲಾಖೆಗೆ ಕೈಜೋಡಿಸುವ ಅಗತ್ಯವಿದೆ.<br />ಕಾರಣ ಆಯಾ ವಾರ್ಡ್ಗಳ ನಗರಸಭೆ ಸದಸ್ಯರು ಜನರಿಗೆ ಮನವರಿಕೆ ಮಾಡಿ ತಿಳಿ ಹೇಳಿದರೆ ಸಾರ್ವಜನಿಕರಿಂದ ಸ್ಪಂದನೆ ನಿರೀಕ್ಷಿಸಬಹುದಾಗಿದೆ ಎಂದು ವೈದ್ಯರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು: </strong>ಮಾರ್ಚ್ ತಿಂಗಳಿನಿಂದ ಕಾಡುತ್ತಿರುವ ಕೊರೊನಾ ರೋಗದ ಕುರಿತು ಜನರಿಗೆ ಜಾಗೃತಿ ಕೊರತೆ ಇದೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರಿಗೂ ಕೋವಿಡ್ ಪರೀಕ್ಷೆ ಮಾಡಿಸಬೇಕು ಎನ್ನುವ ಉದ್ದೇಶದಿಂದ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿ ಚಿಕಿತ್ಸೆ ನೀಡುವ ಟ್ರಯಾಜ್ ತಂಡಕ್ಕೆ ಜನರಿಂದ ಮಾತ್ರ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ.</p>.<p>ನಗರಸಭೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಒಳಗೊಂಡ ಟ್ರಯಾಜ್ ತಂಡ ಎರಡು ವಾಹನ ಹಾಗೂ 50ಕ್ಕೂ ಹೆಚ್ಚು ಆರೋಗ್ಯ ರಕ್ಷಣಾ ಕಿಟ್ಗಳೊಂದಿಗೆ ನಗರಸಭೆ ವ್ಯಾಪ್ತಿಯ 31 ವಾರ್ಡ್ಗಳ ಮನೆಗಳಿಗೆ ಭೇಟಿ ನೀಡುತ್ತಿದೆ.</p>.<p>ಸಾರ್ವಜನಿಕರ ‘ನಿಮ್ಮಿಂದಲೇ ನಮಗೆ ಭಯವಾಗುತ್ತಿದೆ’ ಎನ್ನುವ ಮಾತು ಕೊರೊನಾ ವಾರಿಯರ್ಸ್ಗೆ ಬೇಸರ ತಂದಿದೆ.</p>.<p>ಕೋವಿಡ್ ಪರೀಕ್ಷೆಗೆ ನಾಗರಿಕರು ಮುಂದೆ ಬಾರದಿರುವುದಕ್ಕೆ ರಾಯಚೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯುತ್ತಾರೆನ್ನುವ ಭೀತಿಯೇ ಮುಖ್ಯ ಕಾರಣ. ರೋಗ ಲಕ್ಷಣ ಕಂಡು ಬಂದವರನ್ನು ಮತ್ತು ಸೋಂಕಿತರನ್ನು ರಾಯಚೂರು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ.</p>.<p>ಈಗ ಪರಿಸ್ಥಿತಿ ಭಿನ್ನವಾಗಿದೆ. ಸೋಂಕಿತರಾಗಿರಲಿ ಅಥವಾ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟ ವ್ಯಕ್ತಿಗಳಾಗಿರಲಿ ತಮ್ಮ, ತಮ್ಮ ಮನೆಗಳಲ್ಲಿಯೇ ಕ್ವಾರೆಂಟೈನ್ಗೆ ಒಳಗಾಗಬೇಕು. ಆಸ್ಪತ್ರೆ ಸಿಬ್ಬಂದಿ ಅಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಪರೀಕ್ಷೆಗೆ ಒಳಪಡಲು ಭಯ ಪಡುವ ಅಗತ್ಯವಿಲ್ಲ ಎನ್ನುತ್ತಾರೆ ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜೀವನೇಶ್ವರಯ್ಯ.</p>.<p>ಈಗಾಗಲೇ ತಾಲ್ಲೂಕಿನಲ್ಲಿ ಇಲ್ಲಿಯವರೆಗೆ 14 ಸಾವಿರ ಜನರನ್ನು ಪರೀಕ್ಷೆ ಮಾಡಲಾಗಿದೆ. 1469 ಜನರಿಗೆ ಸೋಂಕು ದೃಢಪಟ್ಟಿದೆ. 428 ಸಕ್ರಿಯ ಪ್ರಕರಣಗಳಿವೆ. 37 ಜನ ಮೃತಪಟ್ಟಿದ್ದಾರೆ. ಗುಣಮುಖರಾಗುವವರ ಸಂಖ್ಯೆ ಅಧಿಕವಾಗಿದೆ.</p>.<p>ಗರ್ಭಿಣಿಯರು, ಸಕ್ಕರೆ, ಬಿಪಿ ಕಾಯಿಲೆ ಇರುವವರು, ಕಿಡ್ನಿ ವೈಫಲ್ಯ ಮತ್ತಿತರ ಕಾಯಿಲೆ ಇರುವವರು ಪರೀಕ್ಷೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆದರೆ ರೋಗ ನಿಯಂತ್ರಿಸಬಹುದು. ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಮುಖಂಡರು ಆರೋಗ್ಯ ಇಲಾಖೆಗೆ ಕೈಜೋಡಿಸುವ ಅಗತ್ಯವಿದೆ.<br />ಕಾರಣ ಆಯಾ ವಾರ್ಡ್ಗಳ ನಗರಸಭೆ ಸದಸ್ಯರು ಜನರಿಗೆ ಮನವರಿಕೆ ಮಾಡಿ ತಿಳಿ ಹೇಳಿದರೆ ಸಾರ್ವಜನಿಕರಿಂದ ಸ್ಪಂದನೆ ನಿರೀಕ್ಷಿಸಬಹುದಾಗಿದೆ ಎಂದು ವೈದ್ಯರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>