ಈ ಕುರಿತು ತಹಶಿಲ್ದಾರ್ ಹಂಪಣ್ಣ ಪ್ರತಿಕ್ರಿಯಿಸಿ,‘ನಗರ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ರುದ್ರಭೂಮಿಯ ಕೊರತೆ ಇರುವ ಕುರಿತು ದೂರುಗಳು ಬಂದಿವೆ. ಹಲವು ಕಡೆ ಖಾಸಗಿ ಮಾಲೀಕರು ಜಾಗ ನೀಡುತ್ತಿಲ್ಲ. ಇದರಿಂದ ವಿಳಂಬವಾಗುತ್ತಿದೆ. ಸರ್ಕಾರಿ ಜಮೀನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು’ ಎಂದು ಭರವಸೆ ನೀಡಿದರು.