ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಮಾನ್ವಿ ಮಂಡಲದ ವತಿಯಿಂದ ಮಾನ್ವಿ, ಹಿರೇಕೊಟ್ನೆಕಲ್, ನೀರಮಾನ್ವಿ, ಪೋತ್ನಾಳ ಪಟ್ಟಣಗಳಲ್ಲಿ ಬಹಿರಂಗ ಪ್ರಚಾರ ಸಭೆಗಳನ್ನು ನಡೆಸಲಾಗಿದ್ದು, ಈ ಸಭೆಗಳಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಗೈರು ಎದ್ದು ಕಾಣುತ್ತಿತ್ತು. ಏ.25ರಂದು ಮಾನ್ವಿಯಲ್ಲಿ ನಡೆದ ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಬಿಜೆಪಿ ಪಕ್ಷದ ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರು ಮಾತ್ರ ಭಾಗವಹಿಸಿದ್ದರು.