ಮರ್ಚೆಡ್ ಕೆರೆ ಸುಮಾರು 400 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿದೆ. ರಣ ಬಿಸಿಲಿಗೆ ಕೆರೆಯ ನೀರು ಒಣಗಿ ಹೋಗಿದೆ. ಮನ್ಸಲಾಪೂರ ಮತ್ತು ಮರ್ಚೆಡ್ ಗ್ರಾಮದ ಮೀನುಗಾರರು ಮೀನು ಸಾಕಾಣಿಕೆ ಮಾಡಿ ಜೀವನ ಸಾಗುತ್ತಿದ್ದಾರೆ. ಕೆರೆಯು ಸಂಪೂರ್ಣ ಒಣಗಿದ್ದರಿಂದ ಸಾಕಾಣಿಕೆ ಮಾಡಿದ ಮೀನುಗಳು ಸಾವನಪ್ಪಿವೆ, ಇದರಿಂದಾಗಿ ಮೀನುಗಾರರ ಬದುಕು ಮೂರಾಬಟ್ಟೆಯಾಗಿದೆ.