<p><strong>ರಾಯಚೂರು: </strong>ಕೆರೆಯ ಹೂಳನ್ನು ರೈತರು ತಮ್ಮ ಜಮೀನಿಗೆ ಸಾಗಿಸಿಕೊಂಡಲ್ಲಿ ಜಮೀನಿನ ಫಲವತ್ತತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.</p>.<p>ಜಿಲ್ಲಾಡಳಿತ ಹಾಗೂ ಭಾರತೀಯ ಜೈನ ಸಂಘ (ಜಿಜೆಎಸ್)ದಿಂದ ತಾಲ್ಲೂಕಿನ ಕಟ್ಲಟಕೂರ್ ಗ್ರಾಮದಲ್ಲಿ ಆರಂಭಿಸಿರುವ ಕೆರೆ ಹೂಳೆತ್ತುವ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದರು.</p>.<p>ರೈತರು ಅಗತ್ಯ ಪ್ರಮಾಣದ ಹೂಳನ್ನು ತಮ್ಮ ಜಮೀನಿಗೆ ಕೊಂಡೊಯ್ಯಬೇಕು. ಕೆರೆಯ ಅಂಚನ್ನು ಮತ್ತಷ್ಟು ಭದ್ರ ಪಡಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು.</p>.<p>ಬಿದ್ದ ಮಳೆ ನೀರು ಕೆರೆಗೆ ಹರಿದು ಬರಲು ಅನುಕೂಲವಾಗುವಂತೆ ಕಾಲುವೆಗಳನ್ನು ಮತ್ತಷ್ಟು ಅಗಲ ಮಾಡುವಂತೆ ಸೂಚಿಸಿದರು.</p>.<p>236.48 ಎಕರೆ ವ್ಯಾಪ್ತಿಯಲ್ಲಿರುವ ಕಟ್ಲಟ್ಕೂರ್ ಕೆರೆಯಲ್ಲಿ ಹೂಳು ತುಂಬಿತ್ತು. ಹೂಳು ತೆಗೆಯುವ ಮುನ್ನ ಕೆರೆ ಅಂಗಳದಲ್ಲಿ ಬೆಳೆದಿದ್ದ ಪೊಟರೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಇದುವರೆಗೆ 2.75 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ಹೊರ ತೆಗೆದು ರೈತರ ಜಮೀನುಗಳಿಗೆ ಸಾಗಿಸಲಾಗಿದೆ. ಪ್ರತಿದಿನ 4 ಹಿಟಾಚಿ ಹಾಗೂ 3 ಜೆಸಿಬಿ ಯಂತ್ರಗಳನ್ನು ಬಳಸಿ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ತಾಂತ್ರಿಕ ತಂಡದಿಂದ ಕೆರೆ ಸಮೀಕ್ಷೆ ಕೈಗೊಂಡ ನಂತರ ಕೆರೆಯ ಆವರಣ, ಕೆರೆಯ ಸಮತಟ್ಟು ಇನ್ನಿತರೆ ಕಾರ್ಯಗಳನ್ನು ನಿರ್ವಹಿಸಲಾಗುತ್ತದೆ.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ನಲಿನ್ ಅತುಲ್ ಕೂಡಾ ಹೂಳು ಹೊರತೆಗೆಯುವ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.</p>.<p>ರೈತರು ಸ್ವಯಂ ಪ್ರೇರಿತರಾಗಿ ಟ್ರಾಕ್ಟರ್ಗಳ ಮೂಲಕ ತಮ್ಮ ಜಮೀನುಗಳಿಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ, ಸಹಾಯಕ ನಿರ್ದೇಶಕ ಸಂದೀಪ್, ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಘಟನಾಧಿಕಾರಿ ಕಮಲ್ ಕುಮಾರ್, ಅಜಿತ್ ರಾಜ್ ಸಂಚಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕೆರೆಯ ಹೂಳನ್ನು ರೈತರು ತಮ್ಮ ಜಮೀನಿಗೆ ಸಾಗಿಸಿಕೊಂಡಲ್ಲಿ ಜಮೀನಿನ ಫಲವತ್ತತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.</p>.<p>ಜಿಲ್ಲಾಡಳಿತ ಹಾಗೂ ಭಾರತೀಯ ಜೈನ ಸಂಘ (ಜಿಜೆಎಸ್)ದಿಂದ ತಾಲ್ಲೂಕಿನ ಕಟ್ಲಟಕೂರ್ ಗ್ರಾಮದಲ್ಲಿ ಆರಂಭಿಸಿರುವ ಕೆರೆ ಹೂಳೆತ್ತುವ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದರು.</p>.<p>ರೈತರು ಅಗತ್ಯ ಪ್ರಮಾಣದ ಹೂಳನ್ನು ತಮ್ಮ ಜಮೀನಿಗೆ ಕೊಂಡೊಯ್ಯಬೇಕು. ಕೆರೆಯ ಅಂಚನ್ನು ಮತ್ತಷ್ಟು ಭದ್ರ ಪಡಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು.</p>.<p>ಬಿದ್ದ ಮಳೆ ನೀರು ಕೆರೆಗೆ ಹರಿದು ಬರಲು ಅನುಕೂಲವಾಗುವಂತೆ ಕಾಲುವೆಗಳನ್ನು ಮತ್ತಷ್ಟು ಅಗಲ ಮಾಡುವಂತೆ ಸೂಚಿಸಿದರು.</p>.<p>236.48 ಎಕರೆ ವ್ಯಾಪ್ತಿಯಲ್ಲಿರುವ ಕಟ್ಲಟ್ಕೂರ್ ಕೆರೆಯಲ್ಲಿ ಹೂಳು ತುಂಬಿತ್ತು. ಹೂಳು ತೆಗೆಯುವ ಮುನ್ನ ಕೆರೆ ಅಂಗಳದಲ್ಲಿ ಬೆಳೆದಿದ್ದ ಪೊಟರೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಇದುವರೆಗೆ 2.75 ಲಕ್ಷ ಕ್ಯೂಬಿಕ್ ಮೀಟರ್ ಹೂಳನ್ನು ಹೊರ ತೆಗೆದು ರೈತರ ಜಮೀನುಗಳಿಗೆ ಸಾಗಿಸಲಾಗಿದೆ. ಪ್ರತಿದಿನ 4 ಹಿಟಾಚಿ ಹಾಗೂ 3 ಜೆಸಿಬಿ ಯಂತ್ರಗಳನ್ನು ಬಳಸಿ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ತಾಂತ್ರಿಕ ತಂಡದಿಂದ ಕೆರೆ ಸಮೀಕ್ಷೆ ಕೈಗೊಂಡ ನಂತರ ಕೆರೆಯ ಆವರಣ, ಕೆರೆಯ ಸಮತಟ್ಟು ಇನ್ನಿತರೆ ಕಾರ್ಯಗಳನ್ನು ನಿರ್ವಹಿಸಲಾಗುತ್ತದೆ.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ನಲಿನ್ ಅತುಲ್ ಕೂಡಾ ಹೂಳು ಹೊರತೆಗೆಯುವ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.</p>.<p>ರೈತರು ಸ್ವಯಂ ಪ್ರೇರಿತರಾಗಿ ಟ್ರಾಕ್ಟರ್ಗಳ ಮೂಲಕ ತಮ್ಮ ಜಮೀನುಗಳಿಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ, ಸಹಾಯಕ ನಿರ್ದೇಶಕ ಸಂದೀಪ್, ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಘಟನಾಧಿಕಾರಿ ಕಮಲ್ ಕುಮಾರ್, ಅಜಿತ್ ರಾಜ್ ಸಂಚಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>