ತಾಲ್ಲೂಕು ಯೋಜನಾಧಿಕಾರಿ ರಘುಪತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಮದ್ಯವರ್ಜನಾ ಶಿಬಿರ, ವಿಕಲಾಂಗರಿಗೆ ವ್ಹೀಲ್ ಚೇರ್, ವಾಕರ್ ವಿತರಣೆ, ಶೌಚಾಲಯ ನಿರ್ಮಾಣ, ಗ್ರಾಮೀಣ ನೈರ್ಮಲ್ಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜ್ಞಾನ ತಾಣ ಎಂಬ ಅಭಿಯಾನದಡಿ ಆಧುನಿಕ ಶಿಕ್ಷಣ ವ್ಯವಸ್ಥೆಯ ಮೂಲಕ ಬಡ ಮಕ್ಕಳ ಜ್ಞಾನಾರ್ಜನೆಗೆ ಶ್ರಮಿಸುತ್ತಿದೆ ಎಂದು ಹೇಳಿದರು.