ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಲಾಭಕ್ಕಾಗಿ ಕೆಜಿ ಹಳ್ಳಿ ಘಟನೆ: ಲಕ್ಷ್ಮಣ ಸವದಿ

Last Updated 14 ಆಗಸ್ಟ್ 2020, 12:54 IST
ಅಕ್ಷರ ಗಾತ್ರ

ರಾಯಚೂರು: ‘ಬೆಂಗಳೂರಿನ ಕೆಜಿ ಹಳ್ಳಿ, ಡಿಜಿ ಹಳ್ಳಿ ಘಟನೆಗಳು ಪೂರ್ವ ನಿಯೋಜಿತವಾಗಿದ್ದು, ರಾಜಕೀಯ ಲಾಭ ಪಡೆಯಲು ನಡೆದಿದೆ ಎಂಬುದು ಗೊತ್ತಾಗಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪ್ರತಿಕ್ರಿಯೆ ನೀಡಿದರು, ‘ನವೀನ್ ಎನ್ನುವ ಯುವಕ ಕಾಂಗ್ರೆಸ್ ಬೆಂಬಲಿಗ. ಸಾಮಾಜಿಕ ಜಾಲದಲ್ಲಿ ಕಾಂಗ್ರೆಸ್‌ ಮುಖಂಡರ ಪೋಸ್ಟರ್‌ಗಳನ್ನು ಹಾಕಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಈಗ ಕಾಂಗ್ರೆಸ್‌ ಮುಖಂಡರು ಏನೇ ಹೇಳಿದರೂ ನವೀನ್‌ ಹಾಕಿರುವುದೆಲ್ಲ ಜಗಜ್ಜಾಹೀರಾಗಿದೆ. ಬಿಜೆಪಿಗೂ ಆತನಿಗೂ ಸಂಬಂಧವಿಲ್ಲ’ ಎಂದರು.

₹25 ಲಕ್ಷ ದೇಣಿಗೆ: ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಬಿಜೆಪಿ ಜಿಲ್ಲಾ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿದರು. ₹1.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕಚೇರಿಗೆ ವೈಯಕ್ತಿಕವಾಗಿ ₹25 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT