<p><strong>ರಾಯಚೂರು:</strong> ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ಗಳನ್ನು ಕಾಯಂಗೊಳಿಸಬೇಕು. ಕೊವಿಡ್ -19 ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ದೇಶದಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದ ಅರ್ಥಿಕತೆ ಕುಸಿಯುತ್ತಿದೆ. ದುಡಿಯುವ ಜನರ ಸಂಕಷ್ಟಕ್ಕೆ ನೆರವಾಗಬೇಕಿದ್ದ ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಜವಾಬ್ದಾರಿ ನೀಡಿ ಕೈಚೆಲ್ಲಿ ಕುಳಿತಿದೆ. ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಪರಿಹಾರ ಘೋಷಣೆ ಮಾಡಿದೆ. ಆದರೆ, ಫಲಾನುಭವಿಗಳಿಗೆ ಇನ್ನೂ ಪರಿಹಾರ ಮೊತ್ತ ಕಲ್ಪಿಸಿಲ್ಲ. ಸರ್ಕಾರ ಲಾಕ್ ಡೌನ್ ಸಂದರ್ಭ ಬಳಸಿಕೊಂಡು ಜನ ವಿರೋಧಿ ಕಾಯ್ದೆ ಜಾರಿಗೆ ತಂದು ಖಾಸಗೀಕರಣಕ್ಕೆ ಮುಂದಾಗಿದೆ ಎಂದು ದೂರಿದರು.</p>.<p>ಸಿಐಟಿಯು ಜಿಲ್ಲಾಧ್ಯಕ್ಷೆ ವರಲಕ್ಷ್ಮೀ, ಎಚ್. ಪದ್ಮಾ, ಜೆಸಿಟಿಯು ಸಂಚಾಲಕ ಡಿ.ಎಸ್. ಶರಣಬಸವ, ಕೆ.ಜಿ ವೀರೇಶ್, ಎಂ ರವಿ, ಬಸವರಾಜ್ ಗಾರಲದಿನ್ನಿ, ಎಂ.ಶರಣಗೌಡ, ಆನಂದ, ತಿಮ್ಮಪ್ಪ, ಗೋಕರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ಗಳನ್ನು ಕಾಯಂಗೊಳಿಸಬೇಕು. ಕೊವಿಡ್ -19 ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ದೇಶದಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದ ಅರ್ಥಿಕತೆ ಕುಸಿಯುತ್ತಿದೆ. ದುಡಿಯುವ ಜನರ ಸಂಕಷ್ಟಕ್ಕೆ ನೆರವಾಗಬೇಕಿದ್ದ ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಜವಾಬ್ದಾರಿ ನೀಡಿ ಕೈಚೆಲ್ಲಿ ಕುಳಿತಿದೆ. ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಪರಿಹಾರ ಘೋಷಣೆ ಮಾಡಿದೆ. ಆದರೆ, ಫಲಾನುಭವಿಗಳಿಗೆ ಇನ್ನೂ ಪರಿಹಾರ ಮೊತ್ತ ಕಲ್ಪಿಸಿಲ್ಲ. ಸರ್ಕಾರ ಲಾಕ್ ಡೌನ್ ಸಂದರ್ಭ ಬಳಸಿಕೊಂಡು ಜನ ವಿರೋಧಿ ಕಾಯ್ದೆ ಜಾರಿಗೆ ತಂದು ಖಾಸಗೀಕರಣಕ್ಕೆ ಮುಂದಾಗಿದೆ ಎಂದು ದೂರಿದರು.</p>.<p>ಸಿಐಟಿಯು ಜಿಲ್ಲಾಧ್ಯಕ್ಷೆ ವರಲಕ್ಷ್ಮೀ, ಎಚ್. ಪದ್ಮಾ, ಜೆಸಿಟಿಯು ಸಂಚಾಲಕ ಡಿ.ಎಸ್. ಶರಣಬಸವ, ಕೆ.ಜಿ ವೀರೇಶ್, ಎಂ ರವಿ, ಬಸವರಾಜ್ ಗಾರಲದಿನ್ನಿ, ಎಂ.ಶರಣಗೌಡ, ಆನಂದ, ತಿಮ್ಮಪ್ಪ, ಗೋಕರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>