ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅವಶ್ಯಕ. ಹುಟ್ಟಿನಿಂದ ಸಾಯುವವರೆಗೆ ಜೀವಿಸಲು ಬೇಕಾಗುವ ಹಕ್ಕುಗಳನ್ನು ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ. ನಾಗರಿಕರ ಹಕ್ಕುಗಳನ್ನು ಪಡೆಯಲು ಕಾನೂನಿನ ಅರಿವು ಮುಖ್ಯವಾಗಿದೆ. ಆ. 14 ರಂದು ನಡೆಯುವ ಲೋಕ ಅದಾಲತ್ನಲ್ಲಿ ತಮ್ಮ ಪ್ರಕರಣಗಳಲ್ಲಿ ತಾವೇ ವಾದಿಸಿ ರಾಜಿ ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹೇಳಿದರು. ಕುಟುಂಬ, ಬ್ಯಾಂಕ್, ಸಿವಿಲ್, ಅಪಘಾತ ಸೇರಿದಂತೆ ಮತ್ತಿತರ ಪ್ರಕರಣಗಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಲೋಕ ಅದಾಲತ್ ನಲ್ಲಿ ಭಾಗವಹಿಸಬೇಕು ಎಂದರು.