<p><strong>ರಾಯಚೂರು</strong>: ತಾಲ್ಲೂಕಿನ ಡಿ.ರಾಂಪುರ ಗ್ರಾಮದ ಪರಮೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದೂವರೆ ತಿಂಗಳಿಂದ ಅಲೆದಾಡಿ ಕುರಿಗಳನ್ನು ಹೊತ್ತೊಯ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಭಾನುವಾರ ಬೆಳಗಿನ ಜಾವ ಬೋನಿಗೆ ಬಿದ್ದಿದೆ.</p><p>ಚಿರತೆ ಮೇ 20ರಂದು ಗ್ರಾಮದ ಹೊರವಲಯದಲ್ಲಿ ಕಾಣಿಸಿಕೊಂಡಿತ್ತು. ಬೀದಿ ನಾಯಿಗಳು ಹಾಗೂ ಬೆಟ್ಟದಲ್ಲಿ ನವಿಲು ತಿಂದು ಪರಮೇಶ್ವರ ಬೆಟ್ಟದ ಬಂಡೆಗಳ ಮಧ್ಯೆ ನೆಲೆಯೂರಿತ್ತು.</p><p>ಚಿರತೆ ಆಹಾರ ಹುಡುಕುತ್ತ ಗ್ರಾಮದ ಅಂಚಿನಲ್ಲಿರುವ ಕಾವಲಿ ಅಶೋಕ ಮನೆಯ ಕೊಟ್ಟಿಗೆಯಲ್ಲಿ ಕಟ್ಟಲಾದ ದನಗಳ ವಾಸನೆಯ ಜಾಡು ಹಿಡಿದು ಮನೆಯ ಬಾಗಿಲ ವರೆಗೂ ಬಂದು ಹೋಗಿತ್ತು. ನಂತರ ಗುಡಿಸಲೊಂದರ ಚಾವಣಿ ಮೇಲಿಂದ ಒಳಗೆ ಬಂದು ಎರಡು ಕುರಿಗಳನ್ನು ಹೊತ್ತೊಯ್ದಿತ್ತು. </p><p>ದನಗಾಯಿಗಳು ಹಾಗೂ ಕುರಿಗಾರರು ದನಕರುಗಳನ್ನು ಮೇಯಿಸಲು ಗುಡ್ಡ ಪ್ರದೇಶಕ್ಕೆ ಹೋಗುವುದು ಹಾಗೂ ಜಾನುವಾರುಗಳಿಗೆ ಮೇವು ತರಲು ಹೋಗುವುದು ಸಹ ಕಷ್ಟವಾಗಿತ್ತು. ಜನ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ಮನೆಯಿಂದ ಹೊರಗೆ ಬರಲು ಭಯಪಡುತ್ತಿದ್ದರು.</p><p>ಗ್ರಾಮಸ್ಥರು ಡ್ರೋನ್ ಕ್ಯಾಮೆರಾದಿಂದ ಬೆಟ್ಟದ ಮೇಲೆ ವೀಕ್ಷಣೆ ಮಾಡಿದಾಗ ಚಿರತೆ ಬಂಡೆ ಗಲ್ಲಿನ ಮೇಲೆ ಕುಳಿತಿರುವುದು ಕಂಡು ಬಂದಿತ್ತು. ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿಪತ್ರಗಳನ್ನು ಸಲ್ಲಿಸಿದ್ದರು.</p><p>‘ಎರಡೂವರೆ ಮೂರು ವರ್ಷದ ಚಿರತೆ ಪರಮೇಶ್ವರ ಬೆಟ್ಟದಲ್ಲಿ ಬಂಡೆಗಲ್ಲಿನ ಮಧ್ಯೆ ನೆಲೆಯೂರಿತ್ತು. ತಿಂಗಳ ಹಿಂದೆಯೇ ಗ್ರಾಮದಲ್ಲಿ ಚಿರತೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿತ್ತು. ಅದು ಪ್ರತಿಬಾರಿಯೂ ತಪ್ಪಿಸಿಕೊಂಡು ಹೋಗುತ್ತಿತ್ತು. ಭಾನುವಾರ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ‘ ಎಂದು ಆರ್ಎಫ್ಒ ರಾಜೇಶ ನಾಯಕ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ತಾಲ್ಲೂಕಿನ ಡಿ.ರಾಂಪುರ ಗ್ರಾಮದ ಪರಮೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದೂವರೆ ತಿಂಗಳಿಂದ ಅಲೆದಾಡಿ ಕುರಿಗಳನ್ನು ಹೊತ್ತೊಯ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಭಾನುವಾರ ಬೆಳಗಿನ ಜಾವ ಬೋನಿಗೆ ಬಿದ್ದಿದೆ.</p><p>ಚಿರತೆ ಮೇ 20ರಂದು ಗ್ರಾಮದ ಹೊರವಲಯದಲ್ಲಿ ಕಾಣಿಸಿಕೊಂಡಿತ್ತು. ಬೀದಿ ನಾಯಿಗಳು ಹಾಗೂ ಬೆಟ್ಟದಲ್ಲಿ ನವಿಲು ತಿಂದು ಪರಮೇಶ್ವರ ಬೆಟ್ಟದ ಬಂಡೆಗಳ ಮಧ್ಯೆ ನೆಲೆಯೂರಿತ್ತು.</p><p>ಚಿರತೆ ಆಹಾರ ಹುಡುಕುತ್ತ ಗ್ರಾಮದ ಅಂಚಿನಲ್ಲಿರುವ ಕಾವಲಿ ಅಶೋಕ ಮನೆಯ ಕೊಟ್ಟಿಗೆಯಲ್ಲಿ ಕಟ್ಟಲಾದ ದನಗಳ ವಾಸನೆಯ ಜಾಡು ಹಿಡಿದು ಮನೆಯ ಬಾಗಿಲ ವರೆಗೂ ಬಂದು ಹೋಗಿತ್ತು. ನಂತರ ಗುಡಿಸಲೊಂದರ ಚಾವಣಿ ಮೇಲಿಂದ ಒಳಗೆ ಬಂದು ಎರಡು ಕುರಿಗಳನ್ನು ಹೊತ್ತೊಯ್ದಿತ್ತು. </p><p>ದನಗಾಯಿಗಳು ಹಾಗೂ ಕುರಿಗಾರರು ದನಕರುಗಳನ್ನು ಮೇಯಿಸಲು ಗುಡ್ಡ ಪ್ರದೇಶಕ್ಕೆ ಹೋಗುವುದು ಹಾಗೂ ಜಾನುವಾರುಗಳಿಗೆ ಮೇವು ತರಲು ಹೋಗುವುದು ಸಹ ಕಷ್ಟವಾಗಿತ್ತು. ಜನ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ಮನೆಯಿಂದ ಹೊರಗೆ ಬರಲು ಭಯಪಡುತ್ತಿದ್ದರು.</p><p>ಗ್ರಾಮಸ್ಥರು ಡ್ರೋನ್ ಕ್ಯಾಮೆರಾದಿಂದ ಬೆಟ್ಟದ ಮೇಲೆ ವೀಕ್ಷಣೆ ಮಾಡಿದಾಗ ಚಿರತೆ ಬಂಡೆ ಗಲ್ಲಿನ ಮೇಲೆ ಕುಳಿತಿರುವುದು ಕಂಡು ಬಂದಿತ್ತು. ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿಪತ್ರಗಳನ್ನು ಸಲ್ಲಿಸಿದ್ದರು.</p><p>‘ಎರಡೂವರೆ ಮೂರು ವರ್ಷದ ಚಿರತೆ ಪರಮೇಶ್ವರ ಬೆಟ್ಟದಲ್ಲಿ ಬಂಡೆಗಲ್ಲಿನ ಮಧ್ಯೆ ನೆಲೆಯೂರಿತ್ತು. ತಿಂಗಳ ಹಿಂದೆಯೇ ಗ್ರಾಮದಲ್ಲಿ ಚಿರತೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿತ್ತು. ಅದು ಪ್ರತಿಬಾರಿಯೂ ತಪ್ಪಿಸಿಕೊಂಡು ಹೋಗುತ್ತಿತ್ತು. ಭಾನುವಾರ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ‘ ಎಂದು ಆರ್ಎಫ್ಒ ರಾಜೇಶ ನಾಯಕ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>