<p><strong>ಸಿರವಾರ:</strong> ‘ಭಾರತದ ಜಾನಪದ ಸಾಹಿತ್ಯ ಸಂಸ್ಕೃತಿ, ಕಲೆ, ಸಾಹಿತ್ಯ ವೈಶಿಷ್ಟ್ಯಪೂರ್ಣವಾಗಿದ್ದು, ಮರೆಯಾಗುತ್ತಿರುವ ಜಾನಪದ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು’ ಎಂದು ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಶಿವಯ್ಯ ಹಿರೇಮಠ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ‘ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ’ ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br><br>‘ನಮ್ಮ ಪೂರ್ವಜ ಮಹಿಳೆಯರು ಓದು ಬರಹ ಬಾರದಿದ್ದರೂ ತಮ್ಮ ಕೆಲಸಗಳ ಮೂಲಕ ಜಾನಪದ ಹಾಡುಗಳನ್ನು ಕಟ್ಟಿ ಹಾಡುವ ಮೂಲಕ ಜಾನಪದ ಸಾಹಿತ್ಯ ಉಳಿಸಿ ಬೆಳೆಸಿ ಶ್ರೀಮಂತವಾಗಿಸಿದ್ದಾರೆ’ ಎಂದರು.</p>.<p>ಹಳೆಯ ಹಾಡುಗಳನ್ನು ಕಲಿಯಬೇಕು, ಸಾಹಿತ್ಯ ಓದಬೇಕು, ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ಹೊಸ ಹೊಸ ಜಾನಪದ ರಚಿಸುವ ಮೂಲಕ ಮುಂದಿನ ಪೀಳಿಗೆಗೆ ಸಾಹಿತ್ಯವನ್ನು ವಿಸ್ತರಿಸಬೇಕು ಎಂದರು.</p>.<p>ಕಾರ್ಯಕ್ರಮಕ್ಕೆ ಅತಿಥಿಗಳನ್ನು ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು. ವಿದ್ಯಾರ್ಥಿಗಳು ಜಾನಪದ ಸಾಹಿತ್ಯದ ಹಾಡುಗಳಿಗೆ ನೃತ್ಯ ಮಾಡಿದರು.<br /> ವಿದ್ಯಾರ್ಥಿಗಳ ಹಳ್ಳಿ ಶೈಲಿಯ ಉಡುಗೆ ತೊಡುಗೆ ಕಣ್ಮನ ಸೆಳೆಯಿತು.</p>.<p>ಕಾಲೇಜು ಪ್ರಾಚಾರ್ಯ ಪಾಂಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಹೀರಾ, ಉಪನ್ಯಾಸಕರಾದ ಲಕ್ಷ್ಮಣ ಯಾದವ್, ರಾಜಶೇಖರ, ಹನುಮಂತ, ವಿನಯ ಶಂಕರ, ಪದ್ಮಾವತಿ, ಸುಭಾನ್ ಸಾಬ್, ಮೌನೇಶ, ಕಾಶಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ‘ಭಾರತದ ಜಾನಪದ ಸಾಹಿತ್ಯ ಸಂಸ್ಕೃತಿ, ಕಲೆ, ಸಾಹಿತ್ಯ ವೈಶಿಷ್ಟ್ಯಪೂರ್ಣವಾಗಿದ್ದು, ಮರೆಯಾಗುತ್ತಿರುವ ಜಾನಪದ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು’ ಎಂದು ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಶಿವಯ್ಯ ಹಿರೇಮಠ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ‘ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ’ ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br><br>‘ನಮ್ಮ ಪೂರ್ವಜ ಮಹಿಳೆಯರು ಓದು ಬರಹ ಬಾರದಿದ್ದರೂ ತಮ್ಮ ಕೆಲಸಗಳ ಮೂಲಕ ಜಾನಪದ ಹಾಡುಗಳನ್ನು ಕಟ್ಟಿ ಹಾಡುವ ಮೂಲಕ ಜಾನಪದ ಸಾಹಿತ್ಯ ಉಳಿಸಿ ಬೆಳೆಸಿ ಶ್ರೀಮಂತವಾಗಿಸಿದ್ದಾರೆ’ ಎಂದರು.</p>.<p>ಹಳೆಯ ಹಾಡುಗಳನ್ನು ಕಲಿಯಬೇಕು, ಸಾಹಿತ್ಯ ಓದಬೇಕು, ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ಹೊಸ ಹೊಸ ಜಾನಪದ ರಚಿಸುವ ಮೂಲಕ ಮುಂದಿನ ಪೀಳಿಗೆಗೆ ಸಾಹಿತ್ಯವನ್ನು ವಿಸ್ತರಿಸಬೇಕು ಎಂದರು.</p>.<p>ಕಾರ್ಯಕ್ರಮಕ್ಕೆ ಅತಿಥಿಗಳನ್ನು ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು. ವಿದ್ಯಾರ್ಥಿಗಳು ಜಾನಪದ ಸಾಹಿತ್ಯದ ಹಾಡುಗಳಿಗೆ ನೃತ್ಯ ಮಾಡಿದರು.<br /> ವಿದ್ಯಾರ್ಥಿಗಳ ಹಳ್ಳಿ ಶೈಲಿಯ ಉಡುಗೆ ತೊಡುಗೆ ಕಣ್ಮನ ಸೆಳೆಯಿತು.</p>.<p>ಕಾಲೇಜು ಪ್ರಾಚಾರ್ಯ ಪಾಂಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಹೀರಾ, ಉಪನ್ಯಾಸಕರಾದ ಲಕ್ಷ್ಮಣ ಯಾದವ್, ರಾಜಶೇಖರ, ಹನುಮಂತ, ವಿನಯ ಶಂಕರ, ಪದ್ಮಾವತಿ, ಸುಭಾನ್ ಸಾಬ್, ಮೌನೇಶ, ಕಾಶಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>