<p><strong>ರಾಯಚೂರು:</strong> ‘ಸರ್ಕಾರದ ಸೌಲಭ್ಯಗಳು ಬಡಜನರು ಮತ್ತು ಬಡ ವಿದ್ಯಾರ್ಥಿಗಳಿಗೆ ದೊರೆತಾಗ ಮಾತ್ರ ಸರ್ಕಾರಗಳು ಜೀವಂತವಾಗಿರುತ್ತವೆ ಇಲ್ಲವಾದರೆ ಸರ್ಕಾರ ಸತ್ತಂತೆ’ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.</p>.<p>ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br><br> ‘ಇಲ್ಲಿಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಖಾಸಗಿ ಶಾಲಾ ಕಾಲೇಜಿನಲ್ಲಿ ಸರಿಸಾಟಿಯಾದ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯಗಳನ್ನು ಪಡೆದು ಉನ್ನತ ಹುದ್ದೆಗಳಿಗೆ ಸೇರಿಕೊಳ್ಳಬೇಕು. ಈ ಮೂಲಕ ಸಮಾಜ ಸೇವೆ ಮಾಡಬೇಕು‘ ಎಂದು ಸಲಹೆ ನೀಡಿದರು.</p>.<p>ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಜಲ್ದಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಕಳೆದ 12 ವರ್ಷಗಳಲ್ಲಿ ಶಾಸಕ ಶಿವರಾಜ ಪಾಟೀಲರ ಶ್ರಮದಿಂದ 34 ಕೊಠಡಿಗಳನ್ನು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಶಾಲೆ ಮತ್ತು ಕಾಲೇಜಿನಲ್ಲಿ ನಿರ್ಮಾಣ ಮಾಡಲಾಗಿದೆ‘ ಎಂದು ತಿಳಿಸಿದರು.</p>.<p>ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿಯವರು ಮಾತನಾಡಿದರು. ಕಲಾವಿದರಾದ ರಾಜು , ಉಪನ್ಯಾಸಕರ ಸಂಘದ ಅಧ್ಯಕ್ಷ ನರಸಪ್ಪ ಭಂಡಾರಿ, ಕಾಲೇಜಿನ ಪ್ರಾಚಾರ್ಯ ಡಾ.ಕುಟೆಂಪ್ಪ ಗೌರಿಪುರ, ಪ್ರಮುಖರಾದ ರವೀಂದ್ರ ಬಂಡಿ, ಗೋವರ್ಧನ ರೆಡ್ಡಿ, ಶರಣಪ್ಪ ಪಾಟೀಲ, ವೀರೇಶ ಸೆರೆಗಾರ್, ಪ್ರೌಢಶಾಲೆಯ ಮುಖ್ಯಗುರು ಶ್ರೀನಿವಾಸ ಮರೆಡ್ಡಿ, ಉಪನ್ಯಾಸಕರಾದ ಚನ್ನಬಸಪ್ಪ, ರಾಣಾ, ಅನಿತಾ, ರವಿಕುಮಾರ ಉಪಸ್ಥಿತರಿದ್ದರು.</p>
<p><strong>ರಾಯಚೂರು:</strong> ‘ಸರ್ಕಾರದ ಸೌಲಭ್ಯಗಳು ಬಡಜನರು ಮತ್ತು ಬಡ ವಿದ್ಯಾರ್ಥಿಗಳಿಗೆ ದೊರೆತಾಗ ಮಾತ್ರ ಸರ್ಕಾರಗಳು ಜೀವಂತವಾಗಿರುತ್ತವೆ ಇಲ್ಲವಾದರೆ ಸರ್ಕಾರ ಸತ್ತಂತೆ’ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.</p>.<p>ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br><br> ‘ಇಲ್ಲಿಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಖಾಸಗಿ ಶಾಲಾ ಕಾಲೇಜಿನಲ್ಲಿ ಸರಿಸಾಟಿಯಾದ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯಗಳನ್ನು ಪಡೆದು ಉನ್ನತ ಹುದ್ದೆಗಳಿಗೆ ಸೇರಿಕೊಳ್ಳಬೇಕು. ಈ ಮೂಲಕ ಸಮಾಜ ಸೇವೆ ಮಾಡಬೇಕು‘ ಎಂದು ಸಲಹೆ ನೀಡಿದರು.</p>.<p>ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಜಲ್ದಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಕಳೆದ 12 ವರ್ಷಗಳಲ್ಲಿ ಶಾಸಕ ಶಿವರಾಜ ಪಾಟೀಲರ ಶ್ರಮದಿಂದ 34 ಕೊಠಡಿಗಳನ್ನು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಶಾಲೆ ಮತ್ತು ಕಾಲೇಜಿನಲ್ಲಿ ನಿರ್ಮಾಣ ಮಾಡಲಾಗಿದೆ‘ ಎಂದು ತಿಳಿಸಿದರು.</p>.<p>ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿಯವರು ಮಾತನಾಡಿದರು. ಕಲಾವಿದರಾದ ರಾಜು , ಉಪನ್ಯಾಸಕರ ಸಂಘದ ಅಧ್ಯಕ್ಷ ನರಸಪ್ಪ ಭಂಡಾರಿ, ಕಾಲೇಜಿನ ಪ್ರಾಚಾರ್ಯ ಡಾ.ಕುಟೆಂಪ್ಪ ಗೌರಿಪುರ, ಪ್ರಮುಖರಾದ ರವೀಂದ್ರ ಬಂಡಿ, ಗೋವರ್ಧನ ರೆಡ್ಡಿ, ಶರಣಪ್ಪ ಪಾಟೀಲ, ವೀರೇಶ ಸೆರೆಗಾರ್, ಪ್ರೌಢಶಾಲೆಯ ಮುಖ್ಯಗುರು ಶ್ರೀನಿವಾಸ ಮರೆಡ್ಡಿ, ಉಪನ್ಯಾಸಕರಾದ ಚನ್ನಬಸಪ್ಪ, ರಾಣಾ, ಅನಿತಾ, ರವಿಕುಮಾರ ಉಪಸ್ಥಿತರಿದ್ದರು.</p>