<p>ಸಿಂಧನೂರು: ಸ್ವಂತ ಮಗನನ್ನೇ ಕೊಲೆ ಮಾಡಿದ ತಂದೆಗೆ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ತೀರ್ಪು ನೀಡಿದ್ದಾರೆ.</p>.<p>ಯಲ್ಲಪ್ಪ ತನ್ನ ಪತ್ನಿಯನ್ನು ಕರೆದುಕೊಂಡು ಬರಲು ಆಕೆಯ ತವರೂರಾದ ಎಲೆಕೂಡ್ಲಿಗಿ ಗ್ರಾಮಕ್ಕೆ 2021ರ ಫೆಬ್ರುವರಿ 1ರಂದು ಹೋದಾಗ ನಿರಾಕರಿಸಿದ್ದಾಳೆ. 4 ವರ್ಷದ ಪುತ್ರ ಮಹೇಶನನ್ನು ಅಪಹರಿಸಿಕೊಂಡು ಹೋಗಿ, 2ನೇ ಆರೋಪಿತಳ ಪ್ರಚೋದನೆಯಿಂದ ಅಂದು ಸಂಜೆ 5.30 ಗಂಟೆಗೆ ಪುಟ್ಕಿನಾಳ ಗ್ರಾಮದ ಸವಳು ಹಳ್ಳದ ಹತ್ತಿರ ಪುತ್ರನ ಕತ್ತು ಹಿಸುಕಿ ಕೊಲೆ ಮಾಡಿದ್ದರಿಂದ ಯಲ್ಲಪ್ಪನ ವಿರುದ್ಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.</p>.<p>ಈ ಪ್ರಕರಣದ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಸಾಕ್ಷ್ಯಾಧಾರಗಳನ್ನು ಪರಾಮರ್ಶಿಸಿ ಮಂಗಳವಾರ 1ನೇ ಆರೋಪಿ ಯಲ್ಲಪ್ಪ ಅಪರಾಧ ಎಸಗಿದ್ದಾರೆಂದು ಪರಿಗಣಿಸಿ ಆತನಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2ನೇ ಆರೋಪಿತಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆರ್.ಎ. ಗಡಕರಿ ವಾದ ಮಂಡಿಸಿದ್ದಾರೆ. ಪಿಸಿ ಪಂಪಾಪತಿ ಅವರು ಸಾಕ್ಷಿದಾರರನ್ನು ಸೂಕ್ತ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಸ್ವಂತ ಮಗನನ್ನೇ ಕೊಲೆ ಮಾಡಿದ ತಂದೆಗೆ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ತೀರ್ಪು ನೀಡಿದ್ದಾರೆ.</p>.<p>ಯಲ್ಲಪ್ಪ ತನ್ನ ಪತ್ನಿಯನ್ನು ಕರೆದುಕೊಂಡು ಬರಲು ಆಕೆಯ ತವರೂರಾದ ಎಲೆಕೂಡ್ಲಿಗಿ ಗ್ರಾಮಕ್ಕೆ 2021ರ ಫೆಬ್ರುವರಿ 1ರಂದು ಹೋದಾಗ ನಿರಾಕರಿಸಿದ್ದಾಳೆ. 4 ವರ್ಷದ ಪುತ್ರ ಮಹೇಶನನ್ನು ಅಪಹರಿಸಿಕೊಂಡು ಹೋಗಿ, 2ನೇ ಆರೋಪಿತಳ ಪ್ರಚೋದನೆಯಿಂದ ಅಂದು ಸಂಜೆ 5.30 ಗಂಟೆಗೆ ಪುಟ್ಕಿನಾಳ ಗ್ರಾಮದ ಸವಳು ಹಳ್ಳದ ಹತ್ತಿರ ಪುತ್ರನ ಕತ್ತು ಹಿಸುಕಿ ಕೊಲೆ ಮಾಡಿದ್ದರಿಂದ ಯಲ್ಲಪ್ಪನ ವಿರುದ್ಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.</p>.<p>ಈ ಪ್ರಕರಣದ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಸಾಕ್ಷ್ಯಾಧಾರಗಳನ್ನು ಪರಾಮರ್ಶಿಸಿ ಮಂಗಳವಾರ 1ನೇ ಆರೋಪಿ ಯಲ್ಲಪ್ಪ ಅಪರಾಧ ಎಸಗಿದ್ದಾರೆಂದು ಪರಿಗಣಿಸಿ ಆತನಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2ನೇ ಆರೋಪಿತಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆರ್.ಎ. ಗಡಕರಿ ವಾದ ಮಂಡಿಸಿದ್ದಾರೆ. ಪಿಸಿ ಪಂಪಾಪತಿ ಅವರು ಸಾಕ್ಷಿದಾರರನ್ನು ಸೂಕ್ತ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>