<p><strong>ಜಾಲಹಳ್ಳಿ</strong>: ‘ಬಡವರು, ಮಧ್ಯಮ ವರ್ಗದ ಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮೂರು ಜೀವ ವಿಮಾ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಶಾಖಾ ವ್ಯವಸ್ಥಾಪಕ ಎನ್.ಮಧುಸೂದನ ಹೇಳಿದರು.</p>.<p>ಸಮೀಪದ ಗಲಗ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಚೇರಿಯಲ್ಲಿ ವಿಮಾ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು.</p>.<p>‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಕಾರ್ಮಿಕರ ಅಪಘಾತ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಯಡಿ ನೋಂದಾಯಿಸಿಕೊಂಡವರು ಅಪಘಾತ ವಿಮೆ ಪಡೆಯಬಹುದು’ ಎಂದು ಹೇಳಿದರು.</p>.<p>ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಹನುಮಂತರಾಯ ಅವರು ಅಪಘಾತದಲ್ಲಿ ಮೃತಪಟ್ಟ ಕಾರಣ ಅವರ ಪತ್ನಿ ಅಕ್ಕನಾಗಮ್ಮ ಅವರಿಗೆ ₹2 ಲಕ್ಷ ಚೆಕ್ ವಿತರಿಸಿದರು.</p>.<p>ಬ್ಯಾಂಕ್ ಅಧಿಕಾರಿಗಳಾದ ರವಿಕುಮಾರ, ಇಮ್ರಾನ್, ವೀರೇಂದ್ರ, ಬ್ಯಾಂಕ್ ಮಿತ್ರರಾದ ಮುದಕಪ್ಪ, ಸಿದ್ದಲಿಂಗಪ್ಪ, ಹನುಮಗೌಡ, ಗ್ರಾಮಸ್ಥರಾದ ಮಲ್ಲೇಶ, ಶಶಿಕುಮಾರ ಸ್ವಾಮಿ ಗಲಗ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ</strong>: ‘ಬಡವರು, ಮಧ್ಯಮ ವರ್ಗದ ಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮೂರು ಜೀವ ವಿಮಾ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಶಾಖಾ ವ್ಯವಸ್ಥಾಪಕ ಎನ್.ಮಧುಸೂದನ ಹೇಳಿದರು.</p>.<p>ಸಮೀಪದ ಗಲಗ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಚೇರಿಯಲ್ಲಿ ವಿಮಾ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು.</p>.<p>‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಕಾರ್ಮಿಕರ ಅಪಘಾತ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಯಡಿ ನೋಂದಾಯಿಸಿಕೊಂಡವರು ಅಪಘಾತ ವಿಮೆ ಪಡೆಯಬಹುದು’ ಎಂದು ಹೇಳಿದರು.</p>.<p>ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಹನುಮಂತರಾಯ ಅವರು ಅಪಘಾತದಲ್ಲಿ ಮೃತಪಟ್ಟ ಕಾರಣ ಅವರ ಪತ್ನಿ ಅಕ್ಕನಾಗಮ್ಮ ಅವರಿಗೆ ₹2 ಲಕ್ಷ ಚೆಕ್ ವಿತರಿಸಿದರು.</p>.<p>ಬ್ಯಾಂಕ್ ಅಧಿಕಾರಿಗಳಾದ ರವಿಕುಮಾರ, ಇಮ್ರಾನ್, ವೀರೇಂದ್ರ, ಬ್ಯಾಂಕ್ ಮಿತ್ರರಾದ ಮುದಕಪ್ಪ, ಸಿದ್ದಲಿಂಗಪ್ಪ, ಹನುಮಗೌಡ, ಗ್ರಾಮಸ್ಥರಾದ ಮಲ್ಲೇಶ, ಶಶಿಕುಮಾರ ಸ್ವಾಮಿ ಗಲಗ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>