<p>ಲಿಂಗಸುಗೂರು: ಮಕ್ಕಳಲ್ಲಿ ಉದ್ಯಮಶೀಲತೆ, ಆತ್ಮವಿಶ್ವಾಸ ಹಾಗೂ ಜೀವನ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಪಟ್ಟಣದ ಅಮರೇಶ್ವರ ಪ್ರೌಢಶಾಲೆಯಲ್ಲಿ ಭಾನುವಾರ ಆಟ ಕೂಟ ಮಕ್ಕಳ ರಂಗ ಶಿಬಿರ ಮಕ್ಕಳಿಗೆ ಆಯೋಜಿಸಿದ್ದ ಮಕ್ಕಳ ಸಂತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.</p>.<p>ಮಕ್ಕಳ ಸಂತೆಯಲ್ಲಿ ಭಾಗವಹಿಸಿದ ರಂಗ ಶಿಬಿರದ ಮಕ್ಕಳು ತಾವೇ ವ್ಯಾಪಾರಿಗಳಾಗಿ ತಿಂಡಿ-ತಿನಿಸು, ಜ್ಯೂಸ್, ನೀರು, ಬಾಳೆ ಹಣ್ಣು ಸೇರಿ ಮುಂತಾದ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದರ ಬಗ್ಗೆ ಪ್ರಾಯೋಗಿಕ ಅನುಭವ ಪಡೆದುಕೊಂಡರು. ಸಂತೆಯಿಂದ ಸಂತಸದ ಅನುಭವ ಪಡೆದುಕೊಂಡರು.</p>.<p>ಮಕ್ಕಳ ಸಂತೆಯನ್ನು ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ಉದ್ಘಾಟಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಎಪಿಎಂಸಿ ಅಧ್ಯಕ್ಷ ಅಮರೇಶ ಹೆಸರೂರು, ಮಹ್ಮದ್ ರಫಿ, ನರೇಶರೆಡ್ಡಿ, ನಿರ್ದೇಶಕ ಶಂಕ್ರಯ್ಯ ಘಂಟಿ, ಪ್ರಭುರಾಜ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-32-1629104099</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ಮಕ್ಕಳಲ್ಲಿ ಉದ್ಯಮಶೀಲತೆ, ಆತ್ಮವಿಶ್ವಾಸ ಹಾಗೂ ಜೀವನ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಪಟ್ಟಣದ ಅಮರೇಶ್ವರ ಪ್ರೌಢಶಾಲೆಯಲ್ಲಿ ಭಾನುವಾರ ಆಟ ಕೂಟ ಮಕ್ಕಳ ರಂಗ ಶಿಬಿರ ಮಕ್ಕಳಿಗೆ ಆಯೋಜಿಸಿದ್ದ ಮಕ್ಕಳ ಸಂತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.</p>.<p>ಮಕ್ಕಳ ಸಂತೆಯಲ್ಲಿ ಭಾಗವಹಿಸಿದ ರಂಗ ಶಿಬಿರದ ಮಕ್ಕಳು ತಾವೇ ವ್ಯಾಪಾರಿಗಳಾಗಿ ತಿಂಡಿ-ತಿನಿಸು, ಜ್ಯೂಸ್, ನೀರು, ಬಾಳೆ ಹಣ್ಣು ಸೇರಿ ಮುಂತಾದ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದರ ಬಗ್ಗೆ ಪ್ರಾಯೋಗಿಕ ಅನುಭವ ಪಡೆದುಕೊಂಡರು. ಸಂತೆಯಿಂದ ಸಂತಸದ ಅನುಭವ ಪಡೆದುಕೊಂಡರು.</p>.<p>ಮಕ್ಕಳ ಸಂತೆಯನ್ನು ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ಉದ್ಘಾಟಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಎಪಿಎಂಸಿ ಅಧ್ಯಕ್ಷ ಅಮರೇಶ ಹೆಸರೂರು, ಮಹ್ಮದ್ ರಫಿ, ನರೇಶರೆಡ್ಡಿ, ನಿರ್ದೇಶಕ ಶಂಕ್ರಯ್ಯ ಘಂಟಿ, ಪ್ರಭುರಾಜ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-32-1629104099</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>