<p><strong>ಲಿಂಗಸುಗೂರು</strong>: ‘ಉತ್ತಮ ಇಳುವರಿಗಾಗಿ ರೈತರು ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸುವತ್ತ ಆಸಕ್ತಿ ವಹಿಸಬೇಕು’ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥೆ ವಾಣಿಶ್ರೀ ಎಸ್. ಹೇಳಿದರು.</p>.<p>ಪಟ್ಟಣದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮು ಬೆಳೆಗಳ ಕುರಿತು ತಾಂತ್ರಿಕ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮುಂಗಾರು ಬಿತ್ತನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಮುಂಗಾರು ಹಂಗಾಮಿನಲ್ಲಿ ಈ ಭಾಗದಲ್ಲಿ ಭತ್ತ, ಹತ್ತಿ, ಮೆಕ್ಕೆಜೋಳ, ಸಜ್ಜೆ, ಶೇಂಗಾ, ತೊಗರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ’ ಎಂದರು. ಕೇಂದ್ರದ ವಿಷಯ ತಜ್ಞೆ ರೇಣುಕಾ ಬಿರಾದಾರ ಮಾತನಾಡಿ,‘ರೈತರು ಮಣ್ಣಿನ ಫಲವತ್ತತೆ ಹಿತದೃಷ್ಟಿಯಿಂದ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಕಡಿಮೆ ಮಾಡಬೇಕು. ಪ್ರತಿ 3 ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡಿಸಿ, ಅದರಲ್ಲಿರುವ ಪೋಷಕಾಂಶಗಳ ಕೊರತೆಗೆ ಅನುಗುಣವಾಗಿ ಮಿತವಾಗಿ ರಾಸಾಯನಿಕ ಗೊಬ್ಬರ ಬಳಸಬೇಕು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-32-798253436</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ‘ಉತ್ತಮ ಇಳುವರಿಗಾಗಿ ರೈತರು ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸುವತ್ತ ಆಸಕ್ತಿ ವಹಿಸಬೇಕು’ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥೆ ವಾಣಿಶ್ರೀ ಎಸ್. ಹೇಳಿದರು.</p>.<p>ಪಟ್ಟಣದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮು ಬೆಳೆಗಳ ಕುರಿತು ತಾಂತ್ರಿಕ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮುಂಗಾರು ಬಿತ್ತನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಮುಂಗಾರು ಹಂಗಾಮಿನಲ್ಲಿ ಈ ಭಾಗದಲ್ಲಿ ಭತ್ತ, ಹತ್ತಿ, ಮೆಕ್ಕೆಜೋಳ, ಸಜ್ಜೆ, ಶೇಂಗಾ, ತೊಗರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ’ ಎಂದರು. ಕೇಂದ್ರದ ವಿಷಯ ತಜ್ಞೆ ರೇಣುಕಾ ಬಿರಾದಾರ ಮಾತನಾಡಿ,‘ರೈತರು ಮಣ್ಣಿನ ಫಲವತ್ತತೆ ಹಿತದೃಷ್ಟಿಯಿಂದ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಕಡಿಮೆ ಮಾಡಬೇಕು. ಪ್ರತಿ 3 ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡಿಸಿ, ಅದರಲ್ಲಿರುವ ಪೋಷಕಾಂಶಗಳ ಕೊರತೆಗೆ ಅನುಗುಣವಾಗಿ ಮಿತವಾಗಿ ರಾಸಾಯನಿಕ ಗೊಬ್ಬರ ಬಳಸಬೇಕು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-32-798253436</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>