<p>ಲಿಂಗಸುಗೂರು: ತಾಲ್ಲೂಕಿನಲ್ಲಿ ಹೋಬಳಿ ಕೇಂದ್ರಗಳನ್ನು ಹೆಚ್ಚಿಸುವಂತೆ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರು ಕಂದಾಯ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ ಮೂರು ಹೋಬಳಿ ಕೇಂದ್ರಗಳು ಇರುವುದರಿಂದ ಮೂರು ಹೋಬಳಿ ಕೇಂದ್ರಗಳಿಗೆ ಹೆಚ್ಚಿನ ಒತ್ತಡ ಹಾಗೂ ಸಾರ್ವಜನಿಕರಿಗೂ ತೊಂದರೆಯಾಗುತ್ತಿದ್ದು, ಒತ್ತಡ ತಪ್ಪಿಸುವ ಉದ್ದೇಶದಿಂದ ತಾಲ್ಲೂಕಿನ ಹಟ್ಟಿ, ನಾಗರಾಳ, ಮಾವಿನಭಾವಿ, ಆನಾಹೊಸೂರು ಗ್ರಾಮಗಳನ್ನು ಹೊಸದಾಗಿ ಹೋಬಳಿ ಕೇಂದ್ರಗಳನ್ನಾಗಿ ಮಾಡಬೇಕು ಎಂದು ಪತ್ರ ಬರೆದಿದ್ದಾರೆ.</p>.<p>ಹಟ್ಟಿ ಪಟ್ಟಣದಲ್ಲಿ 40 ಸಾವಿರ ಜನಸಂಖ್ಯೆ ಇದೆ. ಪಟ್ಟಣದಲ್ಲಿ ಪಶು ಆಸ್ಪತ್ರೆ ಇಲ್ಲದಾಗಿದೆ. ಹಟ್ಟಿ ಹಾಗೂ ಸುತ್ತಮುತ್ತಲಿನ 8-10 ಹಳ್ಳಿಗಳಲ್ಲಿನ ರೈತರು ತಮ್ಮ ಜಾನುವಾರು ಗಳನ್ನು ದೂರದ ಗೆಜ್ಜಲಗಟ್ಟಾ ಗ್ರಾಮಕ್ಕೆ ತೆಗೆದುಕೊಂಡ ಹೋಗಿ ಬರಬೇಕಾಗಿದೆ. ಹೀಗಾಗಿ ಹಟ್ಟಿಯಲ್ಲಿ ಪಶು ಚಿಕಿತ್ಸಾ ಕೇಂದ್ರ ಸ್ಥಾಪನೆ ಮಾಡುವಂತೆ ಪಶು ಸಂಗೋಪನಾ ಇಲಾಖೆ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-32-686786232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ತಾಲ್ಲೂಕಿನಲ್ಲಿ ಹೋಬಳಿ ಕೇಂದ್ರಗಳನ್ನು ಹೆಚ್ಚಿಸುವಂತೆ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರು ಕಂದಾಯ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ ಮೂರು ಹೋಬಳಿ ಕೇಂದ್ರಗಳು ಇರುವುದರಿಂದ ಮೂರು ಹೋಬಳಿ ಕೇಂದ್ರಗಳಿಗೆ ಹೆಚ್ಚಿನ ಒತ್ತಡ ಹಾಗೂ ಸಾರ್ವಜನಿಕರಿಗೂ ತೊಂದರೆಯಾಗುತ್ತಿದ್ದು, ಒತ್ತಡ ತಪ್ಪಿಸುವ ಉದ್ದೇಶದಿಂದ ತಾಲ್ಲೂಕಿನ ಹಟ್ಟಿ, ನಾಗರಾಳ, ಮಾವಿನಭಾವಿ, ಆನಾಹೊಸೂರು ಗ್ರಾಮಗಳನ್ನು ಹೊಸದಾಗಿ ಹೋಬಳಿ ಕೇಂದ್ರಗಳನ್ನಾಗಿ ಮಾಡಬೇಕು ಎಂದು ಪತ್ರ ಬರೆದಿದ್ದಾರೆ.</p>.<p>ಹಟ್ಟಿ ಪಟ್ಟಣದಲ್ಲಿ 40 ಸಾವಿರ ಜನಸಂಖ್ಯೆ ಇದೆ. ಪಟ್ಟಣದಲ್ಲಿ ಪಶು ಆಸ್ಪತ್ರೆ ಇಲ್ಲದಾಗಿದೆ. ಹಟ್ಟಿ ಹಾಗೂ ಸುತ್ತಮುತ್ತಲಿನ 8-10 ಹಳ್ಳಿಗಳಲ್ಲಿನ ರೈತರು ತಮ್ಮ ಜಾನುವಾರು ಗಳನ್ನು ದೂರದ ಗೆಜ್ಜಲಗಟ್ಟಾ ಗ್ರಾಮಕ್ಕೆ ತೆಗೆದುಕೊಂಡ ಹೋಗಿ ಬರಬೇಕಾಗಿದೆ. ಹೀಗಾಗಿ ಹಟ್ಟಿಯಲ್ಲಿ ಪಶು ಚಿಕಿತ್ಸಾ ಕೇಂದ್ರ ಸ್ಥಾಪನೆ ಮಾಡುವಂತೆ ಪಶು ಸಂಗೋಪನಾ ಇಲಾಖೆ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-32-686786232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>