<p><strong>ಲಿಂಗಸುಗೂರು</strong>: ಪಿಂಚಣಿಪುರದಲ್ಲಿ ಪರಿಶಿಷ್ಟರು, ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಿಗೆ ಸೌಕರ್ಯ ಒದಗಿಸಲು ವಿಫಲರಾದ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನ ಜಾಗೃತಿ ಸಮಿತಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>‘ಈ ಪ್ರದೇಶದಲ್ಲಿ ಸಿಸಿ ರಸ್ತೆಗಳಿಲ್ಲದೆ ಸಂಚಾರ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಹದಗೆಟ್ಟಿದೆ. ಹಾವು-ಚೇಳುಗಳಂತಹ ವಿಷಜಂತುಗಳ ಹಾವಳಿ ಹೆಚ್ಚಾಗಿದೆ. ಮಳೆಗಾಲದಲ್ಲಿ ರಾಜಕಾಲುವೆ ನೀರು ಮನೆಗಳಿಗೆ ನುಗ್ಗುತ್ತದೆ’ ಎಂದು ತಿಳಿಸಿದರು.</p>.<p>‘ಹಳೆ ವಿದ್ಯುತ್ ಕಂಬಗಳು ತುಕ್ಕು ಹಿಡಿದಿವೆ. ತಂತಿಗಳು ಪರಸ್ಪರ ತಾಗಿ ಅಪಾಯಕಾರಿ ಸ್ಥಿತಿಯಲ್ಲಿವೆ. ಕಂಬಗಳನ್ನು ಬದಲಾಯಿಸುವುದು ಸೇರಿದಂತೆ ಇತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಎರಡು ತಿಂಗಳುಗಳ ಹಿಂದೆ ನಾಲ್ಕು ದಿನ ಧರಣಿ ನಡೆಸಲಾಗಿತ್ತು’ ಎಂದರು.</p>.<p>‘ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದಾಗಿ ಎರಡು ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಸಮಸ್ಯೆ ಪರಿಹರಿಸಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ವಿನಾಃಕಾರಣ ಕಾಲಹರಣ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಮಾಡುವ ಪುರಸಭೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಕಿರಣಕುಮಾರ ಚಿಕ್ಕಹೆಸರೂರು, ಪ್ರದೀಪ, ಚಿನ್ನಪ್ಪ ರಾರಾವಿ, ಮೌನೇಶ, ಪ್ರವೀಣ, ಹುಲಿಗಪ್ಪ ಕೆಸರಟ್ಟಿ, ಚಿದಾನಂದ ಹಾಗೂ ರಾಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-32-1748638281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ಪಿಂಚಣಿಪುರದಲ್ಲಿ ಪರಿಶಿಷ್ಟರು, ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಿಗೆ ಸೌಕರ್ಯ ಒದಗಿಸಲು ವಿಫಲರಾದ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನ ಜಾಗೃತಿ ಸಮಿತಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>‘ಈ ಪ್ರದೇಶದಲ್ಲಿ ಸಿಸಿ ರಸ್ತೆಗಳಿಲ್ಲದೆ ಸಂಚಾರ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಹದಗೆಟ್ಟಿದೆ. ಹಾವು-ಚೇಳುಗಳಂತಹ ವಿಷಜಂತುಗಳ ಹಾವಳಿ ಹೆಚ್ಚಾಗಿದೆ. ಮಳೆಗಾಲದಲ್ಲಿ ರಾಜಕಾಲುವೆ ನೀರು ಮನೆಗಳಿಗೆ ನುಗ್ಗುತ್ತದೆ’ ಎಂದು ತಿಳಿಸಿದರು.</p>.<p>‘ಹಳೆ ವಿದ್ಯುತ್ ಕಂಬಗಳು ತುಕ್ಕು ಹಿಡಿದಿವೆ. ತಂತಿಗಳು ಪರಸ್ಪರ ತಾಗಿ ಅಪಾಯಕಾರಿ ಸ್ಥಿತಿಯಲ್ಲಿವೆ. ಕಂಬಗಳನ್ನು ಬದಲಾಯಿಸುವುದು ಸೇರಿದಂತೆ ಇತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಎರಡು ತಿಂಗಳುಗಳ ಹಿಂದೆ ನಾಲ್ಕು ದಿನ ಧರಣಿ ನಡೆಸಲಾಗಿತ್ತು’ ಎಂದರು.</p>.<p>‘ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದಾಗಿ ಎರಡು ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಸಮಸ್ಯೆ ಪರಿಹರಿಸಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ವಿನಾಃಕಾರಣ ಕಾಲಹರಣ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಮಾಡುವ ಪುರಸಭೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಕಿರಣಕುಮಾರ ಚಿಕ್ಕಹೆಸರೂರು, ಪ್ರದೀಪ, ಚಿನ್ನಪ್ಪ ರಾರಾವಿ, ಮೌನೇಶ, ಪ್ರವೀಣ, ಹುಲಿಗಪ್ಪ ಕೆಸರಟ್ಟಿ, ಚಿದಾನಂದ ಹಾಗೂ ರಾಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-32-1748638281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>