<p><strong>ಲಿಂಗಸುಗೂರು</strong>: ಪಟ್ಟಣದ ಪ್ರಮುಖ ರಸ್ತೆಗಳ ಬದಿಯಲ್ಲಿಟ್ಟಿದ್ದ ಅಂಗಡಿಗಳನ್ನು ತೆರವುಗೊಳಿಸಿವುದನ್ನು ವಿರೋಧಿಸಿ ವ್ಯಾಪಾರಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳದ ಸ್ಥಳೀಯ ಶಾಖೆ ಪದಾಧಿಕಾರಿಗಳು ಶುಕ್ರವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ಸೌಂದರ್ಯೀಕರಣದ ಹೆಸರಿನಲ್ಲಿ ನಡೆಸುತ್ತಿರುವ ತೆರವು ಕಾರ್ಯಾಚರಣೆ ತಕ್ಷಣವೇ ನಿಲ್ಲಿಸಬೇಕು. ಅಂಗಡಿ ಇಡಲು ಮತ್ತೆ ಅವಕಾಶ ಕಲ್ಪಿಸಬೇಕು. ಪಟ್ಟಣದ ಬೀದಿ ಬದಿ ಮಾರಾಟಗಾರರ ಸಮಿತಿಯೊಂದಿಗೆ ಸಭೆ ನಡೆಸಿ, ವ್ಯಾಪಾರಿಗಳ ಅಭಿಪ್ರಾಯ ಪಡೆಯಬೇಕು. ರಸ್ತೆ ಬದಿ ವ್ಯಾಪಾರಿಗಳ ಕುಂದು ಕೊರತೆ ನಿವಾರಣೆಗಾಗಿ ಸಮಿತಿ ರಚಿಸಬೇಕು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.</p>.<p>ರಸ್ತೆ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯಾಗುವ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಕಾನೂನುಬದ್ಧ ಪ್ರಕ್ರಿಯೆ ಅನುಸರಿಸಬೇಕು. ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ 2014ರ ಕಾಯ್ದೆ ಹಾಗೂ ರಾಜ್ಯ ಸರ್ಕಾರದ 2020ರ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳದ ಶಾಖಾ ಅಧ್ಯಕ್ಷ ಜಗನ್ನಾಥ, ಹುಸೇನಸಾಬ್ ಗಾದಿ, ಅಮರೇಶ ಪವಾರ, ಅಮರೇಶ, ಶರಣಬಸವ, ಮಹಾಂತೇಶ ಹೂಗಾರ, ಶಿವರಾಜ ಗೋಬಿ, ಮೌನೇಶ ಜಾಧವ, ಶೇಖರ, ಉಮೇಶ, ಯಲ್ಲಪ್ಪ, ಶಿವರಾಜ, ಅನಿಲ ಪೋಳ, ಕುಲದೀಪ ಪಟೇಲ್, ದಾದಾಪೀರ ಅವರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-32-1979585018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ಪಟ್ಟಣದ ಪ್ರಮುಖ ರಸ್ತೆಗಳ ಬದಿಯಲ್ಲಿಟ್ಟಿದ್ದ ಅಂಗಡಿಗಳನ್ನು ತೆರವುಗೊಳಿಸಿವುದನ್ನು ವಿರೋಧಿಸಿ ವ್ಯಾಪಾರಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳದ ಸ್ಥಳೀಯ ಶಾಖೆ ಪದಾಧಿಕಾರಿಗಳು ಶುಕ್ರವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ಸೌಂದರ್ಯೀಕರಣದ ಹೆಸರಿನಲ್ಲಿ ನಡೆಸುತ್ತಿರುವ ತೆರವು ಕಾರ್ಯಾಚರಣೆ ತಕ್ಷಣವೇ ನಿಲ್ಲಿಸಬೇಕು. ಅಂಗಡಿ ಇಡಲು ಮತ್ತೆ ಅವಕಾಶ ಕಲ್ಪಿಸಬೇಕು. ಪಟ್ಟಣದ ಬೀದಿ ಬದಿ ಮಾರಾಟಗಾರರ ಸಮಿತಿಯೊಂದಿಗೆ ಸಭೆ ನಡೆಸಿ, ವ್ಯಾಪಾರಿಗಳ ಅಭಿಪ್ರಾಯ ಪಡೆಯಬೇಕು. ರಸ್ತೆ ಬದಿ ವ್ಯಾಪಾರಿಗಳ ಕುಂದು ಕೊರತೆ ನಿವಾರಣೆಗಾಗಿ ಸಮಿತಿ ರಚಿಸಬೇಕು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.</p>.<p>ರಸ್ತೆ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯಾಗುವ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಕಾನೂನುಬದ್ಧ ಪ್ರಕ್ರಿಯೆ ಅನುಸರಿಸಬೇಕು. ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ 2014ರ ಕಾಯ್ದೆ ಹಾಗೂ ರಾಜ್ಯ ಸರ್ಕಾರದ 2020ರ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳದ ಶಾಖಾ ಅಧ್ಯಕ್ಷ ಜಗನ್ನಾಥ, ಹುಸೇನಸಾಬ್ ಗಾದಿ, ಅಮರೇಶ ಪವಾರ, ಅಮರೇಶ, ಶರಣಬಸವ, ಮಹಾಂತೇಶ ಹೂಗಾರ, ಶಿವರಾಜ ಗೋಬಿ, ಮೌನೇಶ ಜಾಧವ, ಶೇಖರ, ಉಮೇಶ, ಯಲ್ಲಪ್ಪ, ಶಿವರಾಜ, ಅನಿಲ ಪೋಳ, ಕುಲದೀಪ ಪಟೇಲ್, ದಾದಾಪೀರ ಅವರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-32-1979585018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>