<p><strong>ಲಿಂಗಸುಗೂರು:</strong> ‘ತಾಲ್ಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ವೀರ ನಾಗಮ್ಮ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮ ಫೆ.15ರಿಂದ 20 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕಿನ ಜನತೆ ಸಹಕಾರ ನೀಡಬೇಕು’ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.</p>.<p>ಪಟ್ಟಣದ ಆರ್.ಎಂ.ಎಸ್. ಕಲ್ಯಾಣ ಮಂಟಪದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವೀರನಾಗಮ್ಮ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದ ಪೋಸ್ಟರ್ ಹಾಗೂ ಧ್ವನಿಸುರಳಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ದೇವಸ್ಥಾನದ ಲೋಕಾರ್ಪಣೆ ಪ್ರಯುಕ್ತ ಫೆ.15ರಿಂದ 20 ರವರೆಗೆ ಪ್ರತಿದಿನ ಸಂಜೆ ಧರ್ಮಸಭೆ, ಗಾಯಕರಿಂದ ಸಂಗೀತ ಕಾರ್ಯಕ್ರಮ, ಕಾಮಿಡಿ ಕಿಲಾಡಿ ತಂಡಗಳಿಂದ ಹಾಸ್ಯಮಂಜರಿ ಕಾರ್ಯಕ್ರಮ, ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಪೂರ್ಣ ಕುಂಭ–ಕಳಸದ ಮೆರವಣಿಗೆ, ರಂಭಾಪುರಿ ಸ್ವಾಮೀಜಿಯ ಅಡ್ಡಪಲ್ಲಕ್ಕಿ ಉ ತ್ಸವ ನಡೆಯಲಿದೆ’ ಎಂದು ಹೇಳಿದರು.</p>.<p>‘ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಸಮಾರಂಭದ ಯಶಸ್ವಿಗೆ ರಚಿಸಲಾಗಿರುವ ಸಮಿತಿಗಳಿಗೆ ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಂಡಲ ಅಧ್ಯಕ್ಷರಾದ ಕೆ.ನಾಗಭೂಷಣ, ಹುಲ್ಲೇಶ ಸಾಹುಕಾರ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಅಯ್ಯಪ್ಪ ಮಾಳೂರು, ಜಗನ್ನಾಥ ಕುಲಕರ್ಣಿ, ಭೀಮಸೇನ ಕುಲಕರ್ಣಿ, ಜೀವಲೆಪ್ಪ ನಾಯ್ಕ, ನಾರಾಯಣಪ್ಪ ನಾಯ್ಕ ಹಾಗೂ ಸಿದ್ದಯ್ಯಸ್ವಾಮಿ ತಲೆಕಟ್ಟು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ‘ತಾಲ್ಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ವೀರ ನಾಗಮ್ಮ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮ ಫೆ.15ರಿಂದ 20 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕಿನ ಜನತೆ ಸಹಕಾರ ನೀಡಬೇಕು’ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.</p>.<p>ಪಟ್ಟಣದ ಆರ್.ಎಂ.ಎಸ್. ಕಲ್ಯಾಣ ಮಂಟಪದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವೀರನಾಗಮ್ಮ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದ ಪೋಸ್ಟರ್ ಹಾಗೂ ಧ್ವನಿಸುರಳಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ದೇವಸ್ಥಾನದ ಲೋಕಾರ್ಪಣೆ ಪ್ರಯುಕ್ತ ಫೆ.15ರಿಂದ 20 ರವರೆಗೆ ಪ್ರತಿದಿನ ಸಂಜೆ ಧರ್ಮಸಭೆ, ಗಾಯಕರಿಂದ ಸಂಗೀತ ಕಾರ್ಯಕ್ರಮ, ಕಾಮಿಡಿ ಕಿಲಾಡಿ ತಂಡಗಳಿಂದ ಹಾಸ್ಯಮಂಜರಿ ಕಾರ್ಯಕ್ರಮ, ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಪೂರ್ಣ ಕುಂಭ–ಕಳಸದ ಮೆರವಣಿಗೆ, ರಂಭಾಪುರಿ ಸ್ವಾಮೀಜಿಯ ಅಡ್ಡಪಲ್ಲಕ್ಕಿ ಉ ತ್ಸವ ನಡೆಯಲಿದೆ’ ಎಂದು ಹೇಳಿದರು.</p>.<p>‘ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಸಮಾರಂಭದ ಯಶಸ್ವಿಗೆ ರಚಿಸಲಾಗಿರುವ ಸಮಿತಿಗಳಿಗೆ ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಂಡಲ ಅಧ್ಯಕ್ಷರಾದ ಕೆ.ನಾಗಭೂಷಣ, ಹುಲ್ಲೇಶ ಸಾಹುಕಾರ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಅಯ್ಯಪ್ಪ ಮಾಳೂರು, ಜಗನ್ನಾಥ ಕುಲಕರ್ಣಿ, ಭೀಮಸೇನ ಕುಲಕರ್ಣಿ, ಜೀವಲೆಪ್ಪ ನಾಯ್ಕ, ನಾರಾಯಣಪ್ಪ ನಾಯ್ಕ ಹಾಗೂ ಸಿದ್ದಯ್ಯಸ್ವಾಮಿ ತಲೆಕಟ್ಟು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>