<p>ಲಿಂಗಸುಗೂರು: ‘ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಶುದ್ಧನೀರಿನ ಘಟಕ ನಡೆಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದಲ್ಲಿ ಸರ್ಕಾರ ಮಾನದಂಡಗಳನ್ನು ಪಾಲಿಸದೇ ವಿವಿಧಡೆಯಲ್ಲಿ ಹಲವಾರು ಶುದ್ಧ ನೀರಿನ ಘಟಕಗಳನ್ನು ನಡೆಸಲಾಗುತ್ತಿದೆ. ಕೆಲವಡೆ ಪರವಾನಗಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟ ಪರೀಕ್ಷೆ ಮಾಡಿಸದೇ ನೀರು ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ ಎಂದು ಆರೋಪಿಸಿದರು.</p>.<p>‘ಇಂತಹ ನೀರಿನ ಘಟಕಗಳು ಸಾಕಷ್ಟು ಸಂಖ್ಯೆಯಲ್ಲಿ ತಲೆಎತ್ತಿವೆ, ಈ ಬಗ್ಗೆ ಪರಿಶೀಲನೆ ನಡೆಸಬೇಕಾದ ಪುರಸಭೆ ಅಧಿಕಾರಿಗಳು ಮೌನಕ್ಕೆ ಶರಣರಾಗಿರುವುದು ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ಅನಧಿಕೃತ ನೀರಿನ ಘಟಕಗಳ ವಿರುದ್ಧ ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿದರು.</p>.<p>ನಮ್ಮ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಾರೆಡ್ಡಿ ಮುನ್ನೂರು, ಪ್ರಧಾನ ಕಾರ್ಯದರ್ಶಿ ರಮೇಶ ಗುತ್ತೇದಾರ, ಬಸವರಾಜ ಕಕ್ಕೇರಿ, ಯಲ್ಲಪ್ಪ ಬಂಡಿ, ರವಿ ಗೊರೇಬಾಳ, ಅಶೋಕ ಗಸ್ತಿ, ಪ್ರವೀಣಕುಮಾರ, ಶ್ರೀಕಾಂತರೆಡ್ಡಿ ಮುನ್ನೂರು, ಈರಣ್ಣ ರೆಡ್ಡಿ, ಶ್ರೀರಾಮ ಸರ್ಜಾಪುರ, ಮೌನೇಶ ಹಾಗೂ ಇನ್ನಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-32-975785814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ‘ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಶುದ್ಧನೀರಿನ ಘಟಕ ನಡೆಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದಲ್ಲಿ ಸರ್ಕಾರ ಮಾನದಂಡಗಳನ್ನು ಪಾಲಿಸದೇ ವಿವಿಧಡೆಯಲ್ಲಿ ಹಲವಾರು ಶುದ್ಧ ನೀರಿನ ಘಟಕಗಳನ್ನು ನಡೆಸಲಾಗುತ್ತಿದೆ. ಕೆಲವಡೆ ಪರವಾನಗಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟ ಪರೀಕ್ಷೆ ಮಾಡಿಸದೇ ನೀರು ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ ಎಂದು ಆರೋಪಿಸಿದರು.</p>.<p>‘ಇಂತಹ ನೀರಿನ ಘಟಕಗಳು ಸಾಕಷ್ಟು ಸಂಖ್ಯೆಯಲ್ಲಿ ತಲೆಎತ್ತಿವೆ, ಈ ಬಗ್ಗೆ ಪರಿಶೀಲನೆ ನಡೆಸಬೇಕಾದ ಪುರಸಭೆ ಅಧಿಕಾರಿಗಳು ಮೌನಕ್ಕೆ ಶರಣರಾಗಿರುವುದು ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ಅನಧಿಕೃತ ನೀರಿನ ಘಟಕಗಳ ವಿರುದ್ಧ ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿದರು.</p>.<p>ನಮ್ಮ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಾರೆಡ್ಡಿ ಮುನ್ನೂರು, ಪ್ರಧಾನ ಕಾರ್ಯದರ್ಶಿ ರಮೇಶ ಗುತ್ತೇದಾರ, ಬಸವರಾಜ ಕಕ್ಕೇರಿ, ಯಲ್ಲಪ್ಪ ಬಂಡಿ, ರವಿ ಗೊರೇಬಾಳ, ಅಶೋಕ ಗಸ್ತಿ, ಪ್ರವೀಣಕುಮಾರ, ಶ್ರೀಕಾಂತರೆಡ್ಡಿ ಮುನ್ನೂರು, ಈರಣ್ಣ ರೆಡ್ಡಿ, ಶ್ರೀರಾಮ ಸರ್ಜಾಪುರ, ಮೌನೇಶ ಹಾಗೂ ಇನ್ನಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-32-975785814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>