<p>ಲಿಂಗಸುಗೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ನಿವಾಸಿಗಳು ಭಯಭೀತರಾಗಿದ್ದಾರೆ. ಕೂಡಲೇ ನಾಯಿಗಳ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿ ನಿವಾಸಿಗಳು ಬುಧವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಪಟ್ಟಣದಲ್ಲಿ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ದಾಳಿಯಿಂದಾಗಿ 5 ಹಾಗೂ 9ನೇ ವಾರ್ಡ್ ಸೇರಿದಂತೆ ವಿವಿಧಡೆ ಮಕ್ಕಳು ಗಂಭೀರವಾಗಿ ಗಾಯಗೊಂಡು ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು ಎಂಟು ತಿಂಗಳುಗಳ ಹಿಂದೆ ಕಸಬಾ ಲಿಂಗಸುಗೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಾಲಕ ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ರೀತಿಯ ಅನೇಕ ಘಟನೆಗಳು ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿವೆ. ಕೂಡಲೇ ಬೀದಿ ನಾಯಿಗಳ ಹಾವಳಿ ತಡೆಯಲು ತುರ್ತು ಕ್ರಮ ಜರುಗಿಸಬೇಕು. ಗಾಯಗೊಂಡ ಮಕ್ಕಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ನಿವಾಸಿಗಳಾದ ಬಾಬಾ ಜಾನಿ, ಜಾಫರ್ ಹುಸೇನ್ ಪೂಲವಾಲೆ, ಮೆಹಬೂಬ್ ಸಾಬ್, ಉಸ್ಮಾನ್ ಅಲಿ, ಮೆಹಬೂಬ್ ಸಾಬ್ ಮನಿಯಾರ, ಹಾಜಿ ಬಾಬಾ, ಐಯುಬ್, ಹುಲ್ಲಪ್ಪ ಭಜಂತ್ರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-32-1757623890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ನಿವಾಸಿಗಳು ಭಯಭೀತರಾಗಿದ್ದಾರೆ. ಕೂಡಲೇ ನಾಯಿಗಳ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿ ನಿವಾಸಿಗಳು ಬುಧವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಪಟ್ಟಣದಲ್ಲಿ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ದಾಳಿಯಿಂದಾಗಿ 5 ಹಾಗೂ 9ನೇ ವಾರ್ಡ್ ಸೇರಿದಂತೆ ವಿವಿಧಡೆ ಮಕ್ಕಳು ಗಂಭೀರವಾಗಿ ಗಾಯಗೊಂಡು ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು ಎಂಟು ತಿಂಗಳುಗಳ ಹಿಂದೆ ಕಸಬಾ ಲಿಂಗಸುಗೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಾಲಕ ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ರೀತಿಯ ಅನೇಕ ಘಟನೆಗಳು ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿವೆ. ಕೂಡಲೇ ಬೀದಿ ನಾಯಿಗಳ ಹಾವಳಿ ತಡೆಯಲು ತುರ್ತು ಕ್ರಮ ಜರುಗಿಸಬೇಕು. ಗಾಯಗೊಂಡ ಮಕ್ಕಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ನಿವಾಸಿಗಳಾದ ಬಾಬಾ ಜಾನಿ, ಜಾಫರ್ ಹುಸೇನ್ ಪೂಲವಾಲೆ, ಮೆಹಬೂಬ್ ಸಾಬ್, ಉಸ್ಮಾನ್ ಅಲಿ, ಮೆಹಬೂಬ್ ಸಾಬ್ ಮನಿಯಾರ, ಹಾಜಿ ಬಾಬಾ, ಐಯುಬ್, ಹುಲ್ಲಪ್ಪ ಭಜಂತ್ರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-32-1757623890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>