ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮತದಾನ ಮಾಡಿ ಮತಗಟ್ಟೆಯಿಂದ ಹೊರ ಬರುವಾಗ ಸತ್ಯವತಿ (60) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುರಸಭೆಯ ವಾರ್ಡ್ ಸಂಖ್ಯೆ 14 ರ ಮತಗಟ್ಟೆಯೊಂದರಲ್ಲಿ ವೃದ್ಧೆ ಮತದಾನ ಮಾಡಿದ್ದರು.