ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಮಾತನಾಡಿ, ‘ತಾಲ್ಲೂಕಿನಲ್ಲಿ ಪೇರಲ, ಪಪ್ಪಾಯ, ದಾಳಿಂಬೆ ಹಾಗೂ ಮೆಣಸಿನಕಾಯಿ ಬೆಳೆದ ರೈತರು ಲಾಭದ ನಿರೀಕ್ಷೆಯಲ್ಲಿದ್ದರು. ಈಗ ಖರೀದಿದಾರರ ಕೊರತೆ ದರ ಕಸಿತಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಬೆಳೆಗಳ ನಿರ್ವಹಣೆಗೆ ಅಗತ್ಯ ಸಲಹೆ, ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.