<p><strong>ರಾಯಚೂರು</strong>: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣ ಶೇ 3 ಕ್ಕಿಂತ ಕಡಿಮೆಯಾದ ಕಾರಣ ಕೆಲವೊಂದು ಸಡಿಲಿಕೆಗಳನ್ನು ನೀಡಲಾಗಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ2 ಗಂಟೆವರೆಗೂ ಅವಕಾಶ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಕೈಗಾರಿಕೆಗಳು ಹಾಗೂ ವೈಟಿಪಿಎಸ್, ಆರ್ಟಿಪಿಎಸ್ ನಲ್ಲಿ ಶೇ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿರುವುದುನ್ನು ಮುಂದುವರಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ 5 ರಷ್ಟಿತ್ತು, ಇದೀಗ ಪಾಸಿಟಿವಿಟಿ ಪ್ರಮಾಣ ಶೇ 3ಕ್ಕೆ ಇಳಿದಿದೆ, ಆದ ಕಾರಣ ಜಿಲ್ಲೆಯಲ್ಲಿ ಕೆಲವೊಂದು ಅಗತ್ಯ ಚಟುವಟಿಕೆಗಳನ್ನು ನಿರ್ವಹಿಸಲು ಮಾತ್ರ ಅವಕಾಶ ಕಲ್ಪಿಸಿದ್ದು, ಉಳಿದ ಚಟುವಟಿಕೆಗಳಿಗೆ ಈ ಹಿಂದಿನಂತೆಯೇ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.</p>.<p>ಜೂನ್ 14 ರಿಂದ ಶುಕ್ರವಾರದವರೆಗೆ ಕಾರ್ಖಾನೆಗಳು, ಉತ್ಪಾದಕ ರಂಗಗಳು ವೈಟಿಪಿಎಸ್, ಆರ್ಟಿಪಿಎಸ್, ಜಿಲ್ಲೆಯಲ್ಲಿರುವ ಔಷಧ ಕಾರ್ಖಾನೆಗಳು ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ದೈನಂದಿನ ಕೆಲಸ ಕಾರ್ಯನಿರ್ವಹಿಸಬಹುದು, ಪ್ರತಿದಿನ ಬೆಳಿಗ್ಗೆ 6 ರಿಂದ 2 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಕಿರಾಣಿ ವಸ್ತುಗಳು, ನೀರು, ಹಾಲು, ಮಾಂಸ, ಹಣ್ಣು ಮಾರಾಟಕ್ಕೆ ಅವಕಾಶವಿದೆ, ಬ್ಯಾಂಕುಗಳು ಬೆಳಗ್ಗೆ 6 ರಿಂದ 2 ರವರೆಗೆ ತೆಗೆಯಲು ಅವಕಾಶ ನೀಡಿದೆ. ಬಾರ್, ರೆಸ್ಟೋರೆಂಟ್ಗಳು ಅವಕಾಶ ನೀಡಿಲ್ಲ, ಆದರೆ ಅಲ್ಲಿ ಕೌಂಟರ್ಗಳ ಮೂಲಕ ಪಾರ್ಸಲ್ಗೆ ಅವಕಾಶ ಕಲ್ಪಿಸಲಾಗಿದೆ, ಅದರಂತೆ ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅಂಗಡಿ, ಸ್ಟೀಲ್, ಸಿಮೆಂಟ್ ಅಂಗಡಿ, ತೆರೆಯಲು 6 ರಿಂದ 2 ರವರೆಗೆ ಅವಕಾಶ ನೀಡಲಾಗಿದೆ, ಉಳಿದಂತೆ ಇತರೆ ಯಾವುದೇ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ, ಆಟೋ ಮತ್ತು ಟ್ಯಾಕ್ಸಿಗೆ ಸಡಿಲಿಕೆ ನೀಡಿದ್ದು ಇಬ್ಬರು ಪ್ರಯಾಣಿಕರೊಂದಿಗೆ ಅವುಗಳು ಸಂಚರಿಸಬಹುದಾಗಿದೆ ಎಂದು ಹೇಳಿದರು.</p>.<p>ಅಂಚೆ ಕಚೇರಿ ಬೆಳಿಗ್ಗೆ 6 ರಿಂದ 2 ರವರೆಗೆ ಕಾರ್ಯನಿರ್ವಹಿಸಬಹುದಾಗಿದೆ, ವಾರಾಂತ್ಯದ ಕರ್ಫ್ಯೂನಲ್ಲಿ ಜನ ಸಂಚಾರಕ್ಕೆ ಅವಕಾಶವಿಲ್ಲ, ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ, ಇದಕ್ಕೆ ಜನಪ್ರತಿನಿಧಿಗಳು ಸಹಕರಿಸಬೇಕು ಎಂದರು.</p>.<p>ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಅಂತರರಾಜ್ಯ ಸಂಚಾರಕ್ಕೆ ಪರವಾನಗಿ ಪಡೆಯಬೇಕಿರುತ್ತದೆ, ಹೊರಗಿನಿಂದ ಇಲ್ಲಿಗೆ ಬಂದರೆ, 7 ದಿನಗಳವರೆಗೆ ಹೊಂ ಕ್ವಾರೆಂಟನ್ನಲ್ಲಿರಬೇಕು, ಬ್ಲಾಕ್ ಫಂಗಸ್ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳಲ್ಲಿ ಶಸ್ತ್ರ ಚಿಕಿತ್ಸೆಯಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಹೇಳಿದರು.</p>.<p>ಪ್ರಮುಖವಾಗಿ ರೈತರು ಬೆಳೆದ ಬೆಳೆಗಳಿಗೆ ಅನುಕೂಲತೆ ಕಲ್ಪಿಸಲು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಪಿಎಂಸಿಯಲ್ಲಿ ವಹಿವಾಟು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣ ಶೇ 3 ಕ್ಕಿಂತ ಕಡಿಮೆಯಾದ ಕಾರಣ ಕೆಲವೊಂದು ಸಡಿಲಿಕೆಗಳನ್ನು ನೀಡಲಾಗಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ2 ಗಂಟೆವರೆಗೂ ಅವಕಾಶ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಕೈಗಾರಿಕೆಗಳು ಹಾಗೂ ವೈಟಿಪಿಎಸ್, ಆರ್ಟಿಪಿಎಸ್ ನಲ್ಲಿ ಶೇ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿರುವುದುನ್ನು ಮುಂದುವರಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ 5 ರಷ್ಟಿತ್ತು, ಇದೀಗ ಪಾಸಿಟಿವಿಟಿ ಪ್ರಮಾಣ ಶೇ 3ಕ್ಕೆ ಇಳಿದಿದೆ, ಆದ ಕಾರಣ ಜಿಲ್ಲೆಯಲ್ಲಿ ಕೆಲವೊಂದು ಅಗತ್ಯ ಚಟುವಟಿಕೆಗಳನ್ನು ನಿರ್ವಹಿಸಲು ಮಾತ್ರ ಅವಕಾಶ ಕಲ್ಪಿಸಿದ್ದು, ಉಳಿದ ಚಟುವಟಿಕೆಗಳಿಗೆ ಈ ಹಿಂದಿನಂತೆಯೇ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.</p>.<p>ಜೂನ್ 14 ರಿಂದ ಶುಕ್ರವಾರದವರೆಗೆ ಕಾರ್ಖಾನೆಗಳು, ಉತ್ಪಾದಕ ರಂಗಗಳು ವೈಟಿಪಿಎಸ್, ಆರ್ಟಿಪಿಎಸ್, ಜಿಲ್ಲೆಯಲ್ಲಿರುವ ಔಷಧ ಕಾರ್ಖಾನೆಗಳು ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ದೈನಂದಿನ ಕೆಲಸ ಕಾರ್ಯನಿರ್ವಹಿಸಬಹುದು, ಪ್ರತಿದಿನ ಬೆಳಿಗ್ಗೆ 6 ರಿಂದ 2 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಕಿರಾಣಿ ವಸ್ತುಗಳು, ನೀರು, ಹಾಲು, ಮಾಂಸ, ಹಣ್ಣು ಮಾರಾಟಕ್ಕೆ ಅವಕಾಶವಿದೆ, ಬ್ಯಾಂಕುಗಳು ಬೆಳಗ್ಗೆ 6 ರಿಂದ 2 ರವರೆಗೆ ತೆಗೆಯಲು ಅವಕಾಶ ನೀಡಿದೆ. ಬಾರ್, ರೆಸ್ಟೋರೆಂಟ್ಗಳು ಅವಕಾಶ ನೀಡಿಲ್ಲ, ಆದರೆ ಅಲ್ಲಿ ಕೌಂಟರ್ಗಳ ಮೂಲಕ ಪಾರ್ಸಲ್ಗೆ ಅವಕಾಶ ಕಲ್ಪಿಸಲಾಗಿದೆ, ಅದರಂತೆ ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅಂಗಡಿ, ಸ್ಟೀಲ್, ಸಿಮೆಂಟ್ ಅಂಗಡಿ, ತೆರೆಯಲು 6 ರಿಂದ 2 ರವರೆಗೆ ಅವಕಾಶ ನೀಡಲಾಗಿದೆ, ಉಳಿದಂತೆ ಇತರೆ ಯಾವುದೇ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ, ಆಟೋ ಮತ್ತು ಟ್ಯಾಕ್ಸಿಗೆ ಸಡಿಲಿಕೆ ನೀಡಿದ್ದು ಇಬ್ಬರು ಪ್ರಯಾಣಿಕರೊಂದಿಗೆ ಅವುಗಳು ಸಂಚರಿಸಬಹುದಾಗಿದೆ ಎಂದು ಹೇಳಿದರು.</p>.<p>ಅಂಚೆ ಕಚೇರಿ ಬೆಳಿಗ್ಗೆ 6 ರಿಂದ 2 ರವರೆಗೆ ಕಾರ್ಯನಿರ್ವಹಿಸಬಹುದಾಗಿದೆ, ವಾರಾಂತ್ಯದ ಕರ್ಫ್ಯೂನಲ್ಲಿ ಜನ ಸಂಚಾರಕ್ಕೆ ಅವಕಾಶವಿಲ್ಲ, ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ, ಇದಕ್ಕೆ ಜನಪ್ರತಿನಿಧಿಗಳು ಸಹಕರಿಸಬೇಕು ಎಂದರು.</p>.<p>ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಅಂತರರಾಜ್ಯ ಸಂಚಾರಕ್ಕೆ ಪರವಾನಗಿ ಪಡೆಯಬೇಕಿರುತ್ತದೆ, ಹೊರಗಿನಿಂದ ಇಲ್ಲಿಗೆ ಬಂದರೆ, 7 ದಿನಗಳವರೆಗೆ ಹೊಂ ಕ್ವಾರೆಂಟನ್ನಲ್ಲಿರಬೇಕು, ಬ್ಲಾಕ್ ಫಂಗಸ್ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳಲ್ಲಿ ಶಸ್ತ್ರ ಚಿಕಿತ್ಸೆಯಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಹೇಳಿದರು.</p>.<p>ಪ್ರಮುಖವಾಗಿ ರೈತರು ಬೆಳೆದ ಬೆಳೆಗಳಿಗೆ ಅನುಕೂಲತೆ ಕಲ್ಪಿಸಲು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಪಿಎಂಸಿಯಲ್ಲಿ ವಹಿವಾಟು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>