ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮೃತನ ಪಾಲಕರು, ಪೊಲೀಸರ ನಿರ್ಲಕ್ಷ್ಯದಿಂದ ಈ ಸಾವಾಗಿದೆ ಎಂದು ಆರೋಪಿಸಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ಪುತ್ರನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಾಕಷ್ಟು ಸಲ ಮನವಿ ಮಾಡಿಕೊಳ್ಳಲಾಗಿತ್ತು. ಆದರೂ ಪೊಲೀಸರು ಕಿವಿಗೊಡಲಿಲ್ಲ ಎಂದು ಮಾಧ್ಯಮಗಳ ಮುಂದೆ ಪಾಲಕರು ಆಳಲು ತೋಡಿಕೊಂಡಿದ್ದಾರೆ.