‘ಹಿಂದಿನ ಎರಡು ಅವಧಿಯ ವಿಧಾನಸಭೆ ಚುನಾವಣೆಗಳಲ್ಲೂ ಮಾನ್ವಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಪಕ್ಷ ನನಗೆ ಟಿಕೆಟ್ ನೀಡಲಿಲ್ಲ. ಆದರೂ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದೇನೆ. ಮಾನ್ವಿಯಲ್ಲಿ ನಾನು ಸ್ಪರ್ಧಿಸಿದಾಗ ಕೇವಲ 2,130 ಮತಗಳಿಂದ ಪರಾಭವಗೊಂಡಿದ್ದೆ. ಬಿ.ಎಸ್.ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಅವರ ಜತೆ ಹೋಗಿದ್ದೆ. ಮರಳಿ ಬಿಜೆಪಿ ಸೇರಿದ್ದೇನೆ. ಈ ಬಾರಿ ಪಕ್ಷ ನನಗೆ ಟಿಕೆಟ್ ನೀಡಿದಲ್ಲಿ ಸ್ಪರ್ಧಿಸುತ್ತೇನೆ’ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.